ಸೇವಾಭಾರತಿ ಕನ್ಯಾಡಿ ವತಿಯಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

0

ಮಂಗಳೂರು: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ ವಿಶ್ವನಾಥ ರೈ, ವಾಮಂಜೂರಿನ ಶ್ರೀ ಜನಾರ್ಧನ ಮತ್ತು ಜಾರ್ದೋಲಿಯ ಪ್ರಕಾಶ್ ರವರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮವನ್ನು ಅಕ್ಟೋಬರ್ 16 ರಂದು ಮಂಗಳೂರಿನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮಂಗಳೂರಿನ ಶ್ರೀಶ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ...

ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

0

ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ ಸರ್ಕಾರಿ  ಬಸ್ ಸಂಚಾರ ಪ್ರಾರಂಭವಾಗಿದೆ.ನೂತನವಾಗಿ ಪ್ರಾರಂಭಗೊಂಡ ಬಸ್ಸಿಗೆ ಕೊಯ್ಯರಿನಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅದ್ದೂರಿ ಸ್ವಾಗತವನ್ನು ಕೋರಿದರು.ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಸದಸ್ಯರಾದ ಶರೀಫ್ ಶಬರಬೈಲ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಕೊಯ್ಯರು, ಕೊಯೂರು ಗ್ರಾಮ...

ಬೆಳ್ತಂಗಡಿ; ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲಪಡೆದು ವಂಚನೆ: ಪ್ರಕರಣ ದಾಖಲು

0

ಬೆಳ್ತಂಗಡಿ:ನಕಲಿ ಚಿನ್ನಾಭರಣ ಅಡಮಾನ ಇರಿಸಿ ಸಾಲ ಪಡೆದು ವಂಚನೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘ ಉಜಿರೆ ಇದರ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್ ಪಾಯಸ್ ದೂರು ನೀಡಿದ್ದು, ಅಬ್ದುಲ್ ರಮೀಜ್ ಎಂಬಾತನು ಸೆ.9 ಮತ್ತು ಅ.8 ರಂದು ಸಹಕಾರ ಸಂಘಕ್ಕೆ ಬಂದು ಕ್ರಮವಾಗಿ 22.900 ಗ್ರಾಂ. ಮತ್ತು 33.910 ಗ್ರಾಂ. ತೂಕದ ಆಭರಣಗಳನ್ನು ಚಿನ್ನಾಭರಣವೆಂದು ನಂಬಿಸಿ ಅಡಮಾನ ಇಟ್ಟು 1,91,000 ರೂ. ಮತ್ತು 2,84,750 ರೂ ಸಾಲ ಪಡೆದುಕೊಂಡಿರುತ್ತಾನೆ.ಅ‌‌.14 ರಂದು ಸಾಮಾಜಿಕ ಜಾಲತಾಣದಲ್ಲಿ...

ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

0

ಬೆಳ್ತಂಗಡಿ; ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಾಗೂ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಅವರು ಅಕ್ಟೋಬರ್ 16 ರಂದು ನಿಧನರಾಗಿದ್ದಾರೆ. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಅತ್ಯದ್ಭುತ...

ಬೆಳ್ತಂಗಡಿ; ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ರಕ್ಷಿತ್ ಶಿವರಾಮ್

0

ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸುದ್ದಾರೆ.ತಾಲೂಕಿನ ಎರಡು ಶಾಲೆಗಳನ್ನು  ಕರ್ನಾಕ ಪಬ್ಲಿಕ್ ಸ್ಕೂಲ್ ಆಗಿ ಮೇಲ್ದರ್ಜೆಗೆ ಏರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಈ ಹಿಂದೆ ಮನವಿಯನ್ನು ಸಲ್ಕಿಸಲಾಗಿತ್ತು. ಈ ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು...

ಮಹೇಶ್ ಶೆಟ್ಟಿ ಗಡಿಪಾರು ಪ್ರಕರಣ ಬಂಟ್ವಾಳ ಡಿ. ವೈ ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್.ಟಿ‌ ದೂರು

0

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಮಾಡಲು  ಸಹಾಯಕ ಆಯುಕ್ತರ‌ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್. ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀತಿ ತಂಡದ ಜಯಂತ್ ಟಿ ಅವರು ಕರ್ನಾಟಕ ಲೋಕಾಯುಕ್ತಕ್ಕೆ, ರಾಜ್ಯ ಮಾನವ ಹಕ್ಕುಗಳ‌ ಆಯೋಗಕ್ಕೆ, ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.ಮಹೇಶ್ ಶೆಟ್ಟಿ ಅವರ ಗಡಿಪಾರು ಪ್ರಕರಣದ‌ ವಿಚಾರಣೆ‌ವೇಳೆ ಬಂಟ್ವಾಳ ಡಿ ವೈ.ಎಸ್.ಪಿ ಅವರು ಪುತ್ತೂರು ಸಹಾಯಕ ಕಮಿಷನರ್ ಅವರ...

ಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

0

ಬೆಳ್ತಂಗಡಿ : ಬಂದೂಕು ಪ್ರಕರಣ ಮತ್ತು ಗಡಿಪಾರು ಆದೇಶ ಪ್ರಕರಣದ ಬಳಿಕ ಕಳೆದ ಒಂದು ತಿಂಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿರುವಾಗ ತಿಮರೋಡಿ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಹೊರಗಡೆ ಗಿರೀಶ್ ಮಟ್ಟಣ್ಣವರ್ ಅ.11 ರಂದು ಮಾಧ್ಯಮಗಳ ಜೊತೆ ಮಾತಾನಾಡುವಾಗ 'ತಿಮರೋಡಿ ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ,ನಾನು ಇಂದೇ ಅವರಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದೆ ಇದ್ರೆ ಅದು ನನ್ನ ತಪ್ಪಾ' ಎಂದು...

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ

0

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶ...

ಮುಂಡಾಜೆ; ಭಾರೀ ಮಳೆಗೆ ಕುಸಿದ ಮೋರಿ ಗುಂಡ ದೈವಸ್ಥಾನದ ಸಂಪರ್ಕ ಕಡಿತ

0

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತ ಉಂಟಾಗಿದೆ.ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.ಈ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ...

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ;  ಶಾಸಹ ಹರೀಶ್ ಪೂಂಜ ಅವರಿಂದ‌ ಅಧಿಕಾರಿಗಳೊಂದಿಗೆ ಸಭೆ, ಕಾಮಗಾರಿ ಆರಂಭಿಸಲು ಸೂಚನೆ

0

ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಕೊನೆಗೂ ಶಾಸಕ ಹರೀಶ್ ಪೂಂಜ‌ ಅವರು ಅಧಿಕಾರಿಗಳ‌ ಸಬೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ಸ್ಥಗಿತಗೊಂಡು ಬಸ್ ನಿಲ್ದಾಣ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಬಗ್ಗೆ "ಬೆಳ್ತಂಗಡಿ ಸಮಾಚಾರ" ಸಮಗ್ರವಾದ ವರದಿಯನ್ನು ಪ್ರಸಾರ ಮಾಡಿತ್ತು.ಇದೀಗ ಶಾಸಕರು ಈ ಬಗ್ಗೆ ಕೊನೆಗೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಅರಣ್ಯ ಇಲಾಖೆ ಸೇರಿದಂತೆ‌ ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿಕಾಮಗಾರಿಯನ್ನು ಮುಕ್ತಾಯಗೊಳಿಸುವ ಸಂಬಂಧ ಇರುವ ಅಡಚಣೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು. ಸಮಸ್ಯೆಗಳನ್ನು ಪರಿಹರಿಸಿ...