ವೇಣೂರು ಪೊಲೀಸರ ಕಾರ್ಯಾಚರಣೆ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ವಾಹನ ವಶಕ್ಕೆ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ ಅ.2 ರಿಂದ ಅ. 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ- 85/2025 500 331(1), 331(4), 305 2.2. 2. 2023 ರಂತೆ ಪ್ರಕರಣ ದಾಖಲಾಗಿರುತ್ತು. ಪ್ರಕರಣದ ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು,...
ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ-ಜನರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಸಭಾ ನಿಧಿ ಬಳಕೆ : ಡಾ ಹೆಗ್ಗಡೆ
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ....
ಕನ್ಯಾಡಿ ಸ್ವಾಮೀಯವರಿಂದ ಹೆಗ್ಗಡೆಯವರ ಭೇಟಿ
ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿಸ್ವಾಮೀಜಿಯವರು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಪೂಜ್ಯ ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ. ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು. ಅರ್ಜಿಯನ್ನು ಭಾಗಶಃ ಮಾನ್ಯ...
ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡು ಸಾಂತ್ವನ. ಹೇಳಿದರು.
ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಶಾಸಕ ಹರೀಶ್ ಪೂಂಜಾ ವಿರೋಧಿಸುತ್ತಿದ್ದಾರೆ. ರಕ್ಷಿತ್ ಶಿವರಾಂ
ಬೆಳ್ತಂಗಡಿ.ಪೋಲಿಸ್ ಇಲಾಖೆಯಲ್ಲಿ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮತ್ತು ಪೋಲಿಸ್ ಇಲಾಖೆಯ ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ಮಂಜೂರುಗೊಳಿಸಿದ್ದು , ಅದನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ. ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿಗರು ವಿರೋಧಿಸುತ್ತಿದ್ದಾರೆ ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ. ಪೋಲಿಸ್ ಇಲಾಖೆಯ ಬಲವರ್ಧನೆ ಮತ್ತು ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್...
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಇಂದು ಹೈಕೋರ್ಟ್ ನಲ್ಲಿ ವಿಚಾರಣೆ
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿರುವ ಎರಡು ಮಹತ್ವದ ಅರ್ಜಿಗಳು ರಾಜ್ಯ ಉಚ್ಚನ್ಯಾಯಾಲಯ ದಲ್ಲಿ ಸೋಮವಾರ ವಿಚಾರಣೆಗೆ ಬರಲಿದ್ದು ನ್ಯಾಯಾಲಯದ ತೀರ್ಪು ಮಹೇಶ್ ಶೆಟ್ಟಿ ತಿಮರೋಡಿ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಲಿದೆ.ಮಹೇಶ್ ಶೆಟ್ಟಿ ಅವರನ್ನು ಗಡಿಪಾರು ಮಾಡಿ ಪುತ್ತೂತು ಸಹಾಯಕ ಕಮಿಷನರ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ನೀಡಿರುವ ಅರ್ಜಿ ಮತ್ತು ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನ17ರಂದು ನಡೆಯಲಿದೆ.ರೌಡಿಶೀಟರ್ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಒಂದು ವರ್ಷಗಳ ಕಾಲ...
ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ; ಅಧ್ಯಕ್ಷರಾಗಿ ಅಲೋಶಿಯಸ್ ಲೋಬೋ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಚುನಾವಣೆಯು ನ.15ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದಿದ್ದು ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಅಲೋಶಿಯಸ್ ಲೋಬೋ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸ್ಪರ್ಧಿಗಳ ಅಂತಿಮ ಫಲಿತಾಂಶ ಈರೀತಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಅಲೋಶಿಯಸ್ ಎಸ್. ಲೋಬೊ ಮತ್ತು ಕೇಶವ ಪಿ. ನಾಮಪತ್ರ ಸಲ್ಲಿಸಿದ್ದು ಇವರೀರ್ವರಲ್ಲಿ ಅಲೋಶಿಯಸ್ ಎಸ್. ಲೋಬೊ 72 ಮತಗಳನ್ನು ಪಡೆದು ಗೆಲುವನ್ನು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇಶವ ಪಿ ಕೇವಲ 48 ಮತಗಳನ್ನು ಪಡೆದು 24 ಮತಗಳ ಅಂತರದಲ್ಲಿ ಸೋಲನ್ನು ಕಂಡಿದ್ದಾರೆ.ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹರಿಪ್ರಕಾಶ್ ಪಿ.ಎನ್ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದ...
ಬೆಳ್ತಂಗಡಿ; ನಗರದ ಹಳೆಕೋಟೆಯ ಸ್ವಸ್ತಿಕ್ ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ನಷ್ಟ
ಬೆಳ್ತಂಗಡಿ; ನಗರದ ಹಳೆಕೋಟೆ ಬಳಿ ಕಾರ್ಯನಿರ್ವಹಿಸುತ್ತಿರುವ ಸ್ವಸ್ತಿಕ್ ಅಟೋ ಗ್ಯಾರೇಜ್ ನಲ್ಲಿ ಭಾನುವಾರ ರಾತ್ರಿಯ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ನಷ್ಟವುಂಟಾಗಿದೆ.ಗ್ಯಾರೇಜ್ ನ ಒಳಗೆ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು ಗ್ಯಾರೇಜ್ ನಲ್ಲಿ ಇದ್ದ ಸಮಾಗ್ರಿಗಳು ಹಾಗೂ ವಾಹನಗಳಿಗೆ ಹೊತ್ತಿಕೊಂಡಿದ್ದು ವ್ಯಾಪಕ ನಷ್ಟಕ್ಕೆ ಕಾರಣವಾಗಿದೆ. ರಾಘವೇಂದ್ರ ಪೂಜಾರಿ ಎಂಬವರಿಗೆ ಸೇರಿದ ಗ್ಯಾರೇಜ್ ಇದಾಗಿದ್ದು ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ವಾಹನವೊಂದರ ಬ್ಯಾಟರಿ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅನುಮಾನಿಸಲಾಗಿದೆ.ಈ ಬಗ್ಗೆ ಇನ್ನೂ ಸರಿಯಾದ ಮಾಹಿತಿಗಳು ಲಭ್ಯವಾಗಿಲ್ಲ. ಅಗ್ನಿ ಶಾಮಕ ದಳದವರು ಪೊಲೀಸರು ಸ್ಥಳಕ್ಕೆ...
ಬೆಳ್ತಂಗಡಿ : ಕುತ್ರೋಟ್ಟು ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ
ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು - ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು...














