ಜೈನ ಮಹಿಳಾ ಸಮಾಜ ವತಿಯಿಂದ ವಿದ್ಯಾ ಪ್ರೋತ್ಸಾಹ ಧನವಿತರಣೆ; ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್
ಬೆಳ್ತಂಗಡಿ; "ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ತಮ್ಮ ಬದುಕನ್ನು ಸುಂದರವಾಗಿಸಲು ಹಾಗೂ ಗಟ್ಟಿಗೊಳಿಸಲು ಶಿಕ್ಷಣವು ಬಹಳ ಮುಖ್ಯವಾಗಿ ಬೇಕೇ ಬೇಕು. ಆದ್ದರಿಂದ ಪ್ರತಿಯೊಬ್ಬ ನಮ್ಮ ಸಮಾಜದ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಅತಿಹೆಚ್ಚಿನ ಗಮನವನ್ನು ನೀಡಿದರೆ ತಮ್ಮ ಬದುಕನ್ನು ಸುಂದರವಾಗಿಸಲು ಸಾಧ್ಯ. ಅಂತಹ ಮೂಲ ಉದ್ದೇಶವನ್ನು ಇಟ್ಟುಕೊಂಡು ಬೆಳ್ತಂಗಡಿಯ ಜೈನ ಮಹಿಳಾ ಸಮಾಜದವರು ಈ ಕಾರ್ಯಕ್ರಮವನ್ನು ಇಟ್ಟುಕೊಂಡಿರುವುದು ನಮ್ಮ ಬೇರೆ ಸಂಸ್ಥೆಯವರಿಗೆ ಮಾದರಿಯಾಗಿದೆ" ಎಂದು ಡಾ| ನವೀನ್ ಕುಮಾರ್ ಜೈನ್ ಹೇಳಿದರು.ಅವರು ಬೆಳ್ತಂಗಡಿಯ ಜೈನ ಮಹಿಳಾ ಸಮಾಜ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ...
ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ
ಬೆಳ್ತಂಗಡಿ; ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಸಂಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯವನ್ನು ಎಲ್ಲರಿಗೂ ದೊರಕಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಘಟನೆ ಪ್ರಯತ್ನಿಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಂಘಟಿತ ಕಾರ್ಮಿಕ ಕಾಂಗ್ರೆಸಿನ ಅಧ್ಯಕ್ಷರಾದ ಅಬ್ಬಾಸ್ ಆಲಿ ವಹಿಸಿದರು ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ...
ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ
ಬೆಳ್ತಂಗಡಿ; ಉಜಿರೆ ಸೇಂಟ್ ಜಾರ್ಜ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಆಚರಿಸಲಾಯಿತು.ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮಕ್ಕಳ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟರು. ಪುತ್ತೂರು ಮೈನಸ್ ಸೆಮಿನರಿ ರೆಕ್ಟರ್ ಫಾ ರೊಬಿನ್ ಕೇಳoಪರಂಬಿಲ್, ಒ ಸಿ ಡಿ ಕರ್ಮಲಾ ಮಾತ ಆಶ್ರಮದ ಸುಪೀರಿಯರ್ ಫಾ ಜೋಸೆಫ್ ಇಲ್ಲಿಕ್ಕಲ್, ಉಜಿರೆ ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗಳಾದ ಬಿಜು ಮ್ಯಾಥ್ಯೂಅಂಬಟ್ ಬಲಿಪೂಜೆಯನ್ನು ಅರ್ಪಿಸಿದರು.ಕಾರ್ಯಕ್ರಮದಲ್ಲಿ ಸಂಡೇ ಸ್ಕೂಲ್ ಪಿ ಟಿ...
ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಪರಿಸರ ದಿನ
ಬೆಳ್ತಂಗಡಿ : ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಪರಿಸರ ದಿನವನ್ನು ಜು. 6ರಂದು ಆಚರಿಸಲಾಯಿತು. ಕಥೋಲಿಕ್ ಸಭಾ, ಎಸ್.ಪಿ.ವಿ ಹಾಗೂ ಐಸಿವೈಎಂ ವತಿಯಿಂದ ನಡೆದ ಕಾರಗಯಕ್ರಮದಲ್ಲಿ ಎಲ್ಲರಿಗೂ ಗಿಡಗಳನ್ನು ಹಂಚಲಾಯಿತು. ಪರಿಸರ ಜಾಗ್ರತೆಗಾಗಿ ಮುಖ್ಯ ಗುರುಗಳಾದ ವಂ.ಸ್ಟಾನಿ ಗೋವಿಯಸ್ ಅವರು ಪರಿಸರದ ಉಳಿವಿನ ಅಗತ್ಯತೆ ಬಗ್ಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ ಸಹಾಯಕ ಗುರುಗಳಾದ ರೆ. ಪಾ. ಲ್ಯಾರಿ ಪಿಂಟೋ, ಧರ್ಮಭಗಿನಿಯರು, ಕ್ಯಾಥೋಲಿಕ್ ಸಭಾ ಆಧ್ಯಕ್ಷ ವಿನ್ಸ್ಸೆಂಟ್ ಡಿ ಸೋಜಾ, ಎಸ್.ವಿ.ಪಿ ಅಧ್ಯಕ್ಷ ಸಿರಿಲ್ ಸಿಕ್ವೆರಾ, ಐಸಿವೈಎಂ ಕೋರ್ಡಿನೆಟರ್ ವಿಲಿಯಂ ಸಿಕ್ವೆರ, ಚರ್ಚ್...
ಮಿತ್ತಬಾಗಿಲು; ಅಕ್ರಮ ಗೋ ಮಾಂಸ ಮಾರಟ ಇಬ್ಬರ ಬಂಧನ
ಬೆಳ್ತಂಗಡಿ; ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಅಕ್ರಮವಾಗಿ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸ್ಥಳೀಯ ನಿವಾಸಿ ಅಬ್ದುಲ್ ರಜಾಕ್ ಎಂಬಾತನಿಗೆ ಸೇರಿದ ಅಂಗಡಿ ಇದಾಗಿದ್ದು ಸ್ಥಳದಿಂದ 47ಕೆಜಿ ದನದ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಅಂಗಡಿ ಮಾಲಕ ಅಬ್ದುಲ್ ರಜಾಕ್ ಹಾಗೂ ಅಂಗಡಿಯಲ್ಲಿದ್ದ ಅಬ್ದುಲ್ ರವೂಫ್ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಗಳು ತಮ್ಮ ಮನೆಯಲ್ಲಿದ್ದ ಜಾನುವಾರನ್ನು ಮಾಂಸಕ್ಕಾಗಿ ವಧೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು ಪೊಲೀಸರು ಆರೋಪಿಗಳ ವಿರುದ್ದ ಕರ್ನಾಟಕ ಗೋವದೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಪ್ರಕರಣ...
ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ
ಸುಲ್ಕೇರಿ: ಗಾರೆ ಕೆಲಸ ಮಾಡಿಕೊಂಡಿದ್ದ ಯುವಕನೊರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ಜು. 4ರಂದು ನಡೆದಿದೆ. ಮೃತ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25ವ) ಎಂದು ಗುರುತಿಸಲಾಗಿದೆ. ಕಿಶೋರು ಅವರು ಗಾರೆ ಕೆಲಸ, ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದರೆನ್ನಲಾಗಿದೆ. ಕಳೆದ ಒಂದು ವಾರದಿಂದ ಮಂಕಾಗಿದ್ದು, ಯಾರಲ್ಲಿಯೂ ಹೆಚ್ಚು ಬೆರೆಯುತ್ತಿರಲಿಲ್ಲ. ನಿನೆ ಮಧ್ಯಾಹ್ನದಿಂದ ಅವರು ನಾಪತ್ತೆಯಾಗಿದ್ದು,ಸಂಜೆಯವರೆಗೆ ಮನೆಗೆ ಬಾರದೆ ಇದ್ದಾಗ ಸ್ಥಳಿಯರು ಸೇರಿ ಹುಡುಕಲು ಪ್ರಾರಂಭುಸಿದರು.ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋರು ಅವರ ಮೃತದೇಹ ಪತ್ತೆಯಾಗಿದೆ...
ಧರ್ಮಸ್ಥಳ ಶವ ಹೂತುಹಾಕಿರುವ ಬಗ್ಗೆ ದೂರು ನೀಡಿದ ಪ್ರಕರಣ; ಯಾವುದೇ ಕಳೆಬರವನ್ನು ನೀಡಿಲ್ಲ, ಎಸ್.ಪಿ ಸ್ಪಷ್ಟನೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿಯ ಪರವಾಗಿ ಬಂದ ವಕೀಲರುಗಳು ಯಾವುದೇ ಕಳೇಬರವನ್ನು ಇಲಾಖೆಗೆ ಹಸ್ತಾಂತರಿಸಿಲ್ಲ. ಕಳೆಬರಗದ ಫೊಟೋ ಗಳನ್ನು ಮಾತ್ರ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟಪಡಿಸಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ:39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆ ಬರಹದ ಕುರಿತು ವಿಚಾರಿಸಿರುವುದಾಗಿ ತಿಳಿಸಿದ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ...
ಕುಪ್ಪೆಟ್ಟಿ -ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ಕಲ್ಲೇರಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಲಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿಉಪ್ಪಿನಂಗಡಿ – ಬೆಳ್ತಂಗಡಿ ರಾಜ್ಯ ಹೆದ್ದರಿಯ ಕುಪ್ಪೆಟ್ಟಿ - ಉಪ್ಪಿನಂಗಡಿ ವರೆಗಿನ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದು ರಸ್ತೆ ದುರಸ್ತಿಗೆ ಒತ್ತಾಯಿಸಿ ಶನಿವಾರ ಕಲ್ಲೇರಿ ಬಸ್ ನಿಲ್ದಾಣ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಕಣಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ , ಕಾರ್ಯದರ್ಶಿ ಮಹೇಶ್ ಜೇಂತ್ಯಾರ್,ತಣ್ಣೀರುಪಂತ ಕೃಷಿ...
ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
ಬೆಳ್ತಂಗಡಿ: ರಾಜ್ಯದಲ್ಲಿ ಪ್ರತಿ ವರ್ಷ ಜುಲೈ ಒಂದರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯಾದ 'ಮಂಗಳೂರು ಸಮಾಚಾರ' ಈ ದಿನದಂದೇ ಪ್ರಕಟವಾಗಿದ್ದು ಇದರ ಅಂಗವಾಗಿ ಪತ್ರಿಕೋದ್ಯಮ ಹಾಗೂ ಅದು ಕಾಲಕ್ಕೆ ತಕ್ಕಂತೆ ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಕರ್ನಾಟಕದಲ್ಲಿ ಜುಲೈ ೧ ರಂದು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.5ರಂದು ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಪತ್ರಿಕಾ ದಿನಾಚರಣೆ ಜರುಗಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು...
ಜುಲೈ 7ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನ ಸ್ಪಂದನಾ ಸಭೆ
ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮಪಂಚಾಯತು ವ್ಯಾಪ್ತಿಯ ಜನಸ್ಪಂದನಾ ಸಭೆ ಜುಲೈ 7 ಸೋಮವಾರ ಅಪರಾಹ್ನ 2.30ಕ್ಕೆ ನಡೆಯಲಿದೆ. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರಲಿದ್ದು ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.