ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ನಲ್ಲಿ ಮೈಸೂರು ವಿಭಾಗದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ.

0

ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುವಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ”ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆಈತ ಬೆಳ್ತಂಗಡಿ ತಾಲೂಕು  ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ...

ಧರ್ಮಸ್ಥಳ;  ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯ ರಿಂದ 666 ನೇ “ವಾತ್ಸಲ್ಯ ಮನೆ” ಹಸ್ತಾಂತರ

0

ಧರ್ಮಸ್ಥಳ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ೬೬೬ನೇ “ವಾತ್ಸಲ್ಯ ಮನೆ” ಹಸ್ತಾಂತರ ಮಾಡಿ ಫಲಾನುಭವಿಗಳಿಗೆ ಮಾಸಾಶನ ಮತ್ತು ಇತರ ಸವಲತ್ತುಗಳನ್ನು ವಿತರಿಸಿ ಆಶೀರ್ವಚನ ನೀಡಿದರು.ಅದ್ವೈತ ತತ್ವ ಪ್ರಸಾರ ಮಾಡಿದ ಆದಿ ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಸಾರ್ವಕಾಲಿಕವಾಗಿ ಅನ್ವಯವಾಗುವಂತಹ ಮೇಲಿನಂತೆ ಉಪದೇಶ ನೀಡಿದ್ದಾರೆ ಎಂದರು.ಸಾಧ್ಯವಾದಷ್ಟು...

ಕ್ರೈಸ್ಟ್ ಅಕಾಡೆಮಿಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ

0

ಬೆಳ್ತಂಗಡಿ; ರೋಟರಿ ಸಮುದಾಯ ದಳ ಮುಂಡಾಜೆ, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು, ಹಾಗೂ ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಸಮುದಾಯ ದಳ ಮುಂಡಾಜೆ ಇದರ ಅಧ್ಯಕ್ಷರಾದ ಪಿ.ಸಿ ಸೆಬಾಸ್ಟಿಯನ್ ಅವರು ನೆರವೇರಿಸಿ ಶುಭ ಹಾರೈಸಿದರು.ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ಕ್ರೈಸ್ಟ್ ಅಕಾಡಮಿಯ ಪ್ರಾಂಶುಪಾಲರಾದ ಜಾರ್ಜ್ ಸಿ.ಎಂ.ಐ ಅವರು ವಹಿಸಿ ಶುಭ ಹಾರೈಸಿದರು.ಮುಖ್ಯ ಅತಿಧಿಗಳಾಗಿ ಆಗಮಿಸಿದ್ದ ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಆನಂದ್ ಅವರು ಆಗಮಿಸಿ...

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಜನಸಾಮಾನ್ಯರ ಕಾಳಜಿಯೇ ಸರಕಾರದ ಧ್ಯೇಯ‌ ದಿನೇಶ್ ಗುಂಡೂರಾವ್

0

ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದರು."ಮುಖ್ಯಮಂತ್ರಿಸಿದ್ದರಾಮಯ್ಯನವರ ಹಸಿವು ಮುಕ್ತ ಕರ್ನಾಟಕ ಚಿಂತನೆಯಂತೆ ಇಂದಿರಾ ಕ್ಯಾಂಟೀನ್ ಗಳು ಅಗತ್ಯ ಸ್ಥಳಗಳಲ್ಲಿ ನಿರ್ಮಾಣಗೊಳ್ಳುತ್ತಿವೆ. ಪ್ರತಿದಿನ ಬದಲಾವಣೆ ಆಧಾರದಲ್ಲಿ...

ಎಸ್.ಐ.ಟಿ ಕಚೇರಿಗೆ ತೆರಳಿದ ಸೌಜನ್ಯ ತಾಯಿ ಕುಸುಮಾವತಿ, ಗಿರೀಶ್ ಮಟ್ಟಣ್ಣನವರ್ ಜಯಂತ್ ಹಾಗೂ ತಂಡ

0

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ‌ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ ಭಟ್, ಲಕ್ಷಣ್ ಗೌಡ, ಹಾಗೂ ಇತರರು ಶನಿವಾರ ಮಧ್ಯಾಹ್ನದ ವೇಳೆಗೆ ತೆರಳಿದ್ದಾರೆ. ಸೌಜನ್ಯ ಪ್ರಕರಣ ಸೇರಿದಂತೆ ವಿವಿಧ ಪ್ರಕ್ರಣಗಳ ಬಗ್ಗೆ ದೂರು ನೀಡಲು ಇವರು ತೆರಳಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುವಬರಬೇಕಾಗಿದೆ.

ಬೆಳ್ತಂಗಡಿ : ಉಜಿರೆಯಲ್ಲಿ ಎಸ್‌.ಐ.ಟಿ ಯಿಂದ ತನಿಖೆ ಚುರುಕು; ಖಾಸಗಿ ಡೆಂಟಲ್ ಕ್ಲಿನಿಕ್ ಗೆ ತೆರಳಿದ ಅಧಿಕಾರಿಗಳು

0

ಬೆಳ್ತಂಗಡಿ : ಉಜಿರೆಯ ಖಾಸಗಿ ಕ್ಲಿನಿಕ್ ಗೆ ತೆರಳಿ ಎಸ್.ಐ.ಟಿ ಅಧಿಕಾರಿಗಳಿ ಇವರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಕೆ.ಮೆಮೋರಿಯಲ್ ಹಾಲ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಖಾಸಗಿ ದಂತ ಚಿಕಿತ್ಸಾಲಯಕ್ಕೆ ಎಸ್.ಐ.ಟಿ ತಂಡ ಜೊತೆ ಎಫ್ಎಸ್ಎಲ್ ವಿಭಾಗದ ಸೋಕೋ ತಂಡ ಶನಿವಾರ ಮಧ್ಯಾಹ್ ದ ವೇಳೆ ತೆರಳಿದ್ದು ಇಲ್ಲಿನ ವೈಧ್ಯರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ. ಬುರುಡೆಯೊಂದಿಗೆ ಸಿಕ್ಕಿರುವ ಹಲ್ಲುಗಳ ಬಗ್ಗೆ ಯಾವದೋ ಮಾಹಿತಿ ಪಡೆಯುವುದಕ್ಕಾಗಿ ಅಧಿಕಾರಿಗಳು ಡಾ.ದಯಕರ್ ಅವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿಗಳು...

ಬೆಳ್ತಂಗಡಿ; ಬಸ್ ನಿಲ್ದಾಣದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿ

0

ಬೆಳ್ತಂಗಡಿ: ಟಿಕೆಟ್ ಹಣದ ವಿಚಾರದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿಯಾದ ಘಟನೆ ಶುಕ್ರವಾರ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಟಿಕೆಟ್ ದುಡ್ಡುಕೊಟ್ಟಿದ್ದೇನೆ ಎಂದು ಪ್ರಯಾಣಿಕ, ಕೊಟ್ಟಿಲ್ಲ ಎಂದು ಮಹಿಳಾ ಕಂಡಕ್ಟರ್ ವಾದ ತಾರಕಕ್ಕೇರಿ, ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆಗೆ ಮುಂದಾಗಿರುವುದಾಗಿ ಹೇಳಲಾಗಿದೆ.ಮೂಡಿಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಉಜಿರೆಯಲ್ಲಿ ಹತ್ತಿದ ಪ್ರಯಾಣಿಕ ಟಿಕೆಟ್ ಹಣ ಕೊಟ್ಟಿದ್ದೇನೆ ಅಂತ ವಾದಿಸುತ್ತಿದ್ದರೆ, ಲೇಡಿ ಕಂಡಕ್ಟರ್ ಹಣ ಕೊಟ್ಟಿಲ್ಲ ಅಂತ ವಾದಿಸುತ್ತಿದ್ದರು.‌ ಬಸ್ ನಲ್ಲಿದ್ದ ಪ್ರಯಾಣಿಕರು ಆತ ಹಣ ಕೊಟ್ಟಿದ್ದಾನೆ ಎಂದು...

ಮುಂಡಾಜೆ: ತೆರೆದ ಚರಂಡಿಗೆ ಬಿದ್ದು ಶಿಕ್ಷಕನಿಗೆ ಗಾಯ

0

ಬೆಳ್ತಂಗಡಿ:ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕರೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಮುಂಡಾಜೆ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದ ಬ್ಯಾನರನ್ನು ಮಂಗಳೂರು-ವಿಲ್ಲುಪುರಂ ಹೆದ್ದಾರಿಯ ಸೋಮಂತಡ್ಕ ರಸ್ತೆ ಬದಿಯ ಪ್ರದೇಶದಲ್ಲಿ ಅಳವಡಿಸಲು ಸ್ವಯಂಸೇವಕರ ಜತೆ ಗುರುವಾರ ಸಂಜೆ ಶಿಕ್ಷಕ ತೆರಳಿದ್ದರು. ಬ್ಯಾನರ್ ಕಟ್ಟುವ ಸಮೀಪ ತೆರೆದ ಚರಂಡಿ ಗಮನಕ್ಕೆ ಬರದ ಕಾರಣ ಸುಮಾರು 6 ಅಡಿ ಆಳಕ್ಕೆ ಬಿದ್ದು ಕಾಲಿಗೆ ಗಂಭೀರ ಸ್ವರೂಪದ ಗಾಯಗಳಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೆರೆದ ಚರಂಡಿ ಸಮಸ್ಯೆ ರಾಷ್ಟ್ರೀಯ ಹೆದ್ದಾರಿ...

ಬೆಳ್ತಂಗಡಿ;  ಅ11 ರಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ ರಕ್ಷಿತ್ ಶಿವಾರಾಂ

0

ಬೆಳ್ತಂಗಡಿ; ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅ11ರಂದು ಬೆಳ್ತಂಗಡಿಗೆ ಆಗಮಿಸಲಿದ್ದು ತಾಲೂಕಿನ‌ ಜನರ ಬಹುದಿನಗಳ‌ ಬೇಡಿಕೆಯಾಗಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಲಿದ್ದಾರೆ ಎಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು.ಸೆ11ರಂದು ಬೆಳ್ತಂಗಡಿಗೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರುಪೂಂಜಾಲಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದ ಉಧ್ಘಾಟನೆ,ಮಾಲಾಡಿ ಸಬರ ಬೈಲಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ...

ಉಜಿರೆ; ಅರಳಿಯಲ್ಲಿ ಮನೆಗೆ ನುಗ್ಗಿ ನಗದು ಚಿನ್ನಾಭರಣ ಕಳವು

0

ಉಜಿರೆ: ಇಲ್ಲಿಯ ಅರಳಿ ಬಳಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಯಾರೋ ಕಳ್ಳರು ಕಳ್ಳತನ ಮಾಡಿ ನಗ -ನಗದು ದೋಚಿ ಪರಾರಿಯಾದ ಘಟನೆ ಅ.9ರಂದು ನಡೆದಿದೆ. ಬೆಟ್ಟು ಮನೆಯ ಅರಳಿ ನಿವಾಸಿ ಮಹಾಬಲ ರವರು ಬೆಳಗ್ಗೆ ಎಂದಿನಂತೆ ಕೆಲಸ ಹೋಗಿದ್ದು ಈ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಪಕ್ಕಾಸು ತೆಗೆದು ಮನೆಯ ಒಳನುಗ್ಗಿ ಕಪಾಟಿನಲ್ಲಿದ್ದ ರೂ. 10000 ನಗದು ಹಾಗೂ 50ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.