ತೋಟತ್ತಾಡಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಬೆಳ್ತಂಗಡಿ:ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಬೆಳ್ತಂಗಡಿ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಉಪಾಧ್ಯಕ್ಷರಾದ ಪ್ರಮೀಳಾ ಹಾಗೂ ಸದಸ್ಯರು.ಶಾಲಾಮುಖ್ಯ ಶಿಕ್ಷಕರಾದ ಸಂತೋಷ್ ಕುಮಾರ್ ಪ್ರಮುಖರಾದ ಶುಭಕರ ಪೂಜಾರಿ, ದಿನೇಶ್ ಕೋಟ್ಯಾನ್, ಸುಂದರ ಬಂಗೇರ, ಸಂದೀಪ್ ಪೂಜಾರಿ, ಗಣೇಶ್ ಕೋಟ್ಯಾನ್, ಜಯ ಪೂಜಾರಿ, ಉಮೇಶ್ ಕುಲಾಲ್, ಲೋಕಯ್ಯ ಕುಂಟ್ಯಾನ. ಪಂಚಾಯತ್ ಸದಸ್ಯರಾದ ಸರೋಜ ಆಂಡಿಂಜೆ...
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಎಸ್.ಐ.ಟಿ ಅಧಿಕಾರಿಗಳಿಂದ ಕೋರ್ಟ್ ಗೆ ವರದಿ ಸಲ್ಲಿಕೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು 'ಸುಳ್ಳು ಸಾಕ್ಷಿ' ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಖ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ 'ಸುಳ್ಳು ಸಾಕ್ಷಿ'...
ಕೇರಳದ ಶಿವಗಿರಿ ಮಠದ ಸ್ವಾಮಿಗಳಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಭೇಟಿ
ಬೆಳ್ತಂಗಡಿ; ಡಿಸೆಂಬರ್ 3 ರಂದು ಮಂಗಳೂರಿನ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಕೋಣಾಜೆ ಮೈದನದಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರುಗಳು ಮತ್ತು ಮಹಾತ್ಮಾ ಗಾಂಧಿ ಯವರ ಭೇಟಿಯ ಶತಮಾನೋತ್ಸತ್ವದ ಸಂಬ್ರಮಾಚಾರಣೆಯಾದ, " ಗುರು ಗಾಂಧಿ ಸಂವಾದ ಶತಮಾನೋತ್ಸವ" ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ರಾದ ಪೂಜ್ಯ ಜೇಮ್ಸ್ ಪಟ್ಟೆರಿ ಯವರನ್ನು ಮತ್ತು ನಿಕಟಪೂರ್ವ ಧರ್ಮಾಧ್ಯಕ್ಷರಾದ ಪೂಜ್ಯ ಲಾರೆನ್ಸ್ ಮುಕ್ಕುಝಿಯವರನ್ನು ಆಹ್ವಾನಿಸಲು ಶಿವಗಿರಿಮಠದ ಪೂಜ್ಯ ಶ್ರೀ ಜ್ಞಾನತಿರ್ಥ ಸ್ವಾಮಿಜಿಗಳು ಮತ್ತು ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನದ ಪೂಜ್ಯ ಶ್ರೀ ವಿಖ್ಯಾತಾನಂದ ಸ್ವಾಮಿಜಿಗಳು ಮತ್ತು...
ಧರ್ಮಸ್ಥಳ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ19 ರಂದು ನಡೆದಿದೆ.ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಬುಧವಾರ ಸಂಜೆಯ ವೇಳೆಗೆ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.
ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು
ಬೆಳ್ತಂಗಡಿ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ...
ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ
ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಹಾಗೂ ಎಸ್.ಐ.ಟಿ ತನಿಖೆಗೆ ತಡೆ ನೀಡಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್ ನಿರಾಕರಿಸಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ (ಎಫ್ಐಆರ್ ಸಂಖ್ಯೆ- 39/2025) ಹಾಗೂ ಎಸ್ಐಟಿ ತನಿಖೆ ರದ್ದು ಕೋರಿ ಉಜಿರೆ ನಿವಾಸಿ ಗಣೇಶ್ ಶೆಟ್ಟಿ (29) ಎಂಬುವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಮತ್ತು ಎಸ್ಐಟಿ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು. ಮಧ್ಯಂತರ ಮನವಿ ಮಾಡಿದ್ದರು. ಈ ಅರ್ಜಿಯನ್ನು...
ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು ವಹಿಸಿದ್ದರು.ಸಮ್ಮೇಳನದಲ್ಲಿ ಬೆಂಗಳೂರಿನ ಶಾಂತಾ ನಾಗಮಂಗಲ, ಡಾ.ರಘು, ಡಾ.ಬಿ.ಎಂ ಶರಭೇಂದ್ರ ಸ್ವಾಮಿ ಅವರು ಉಪನ್ಯಾಸಗಳನ್ನು ನೀಡಿದರು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಸಾಹಿತ್ಯಕ್ಕೂ ಇರುವ ಸಂಬಂಧಗಳನ್ನುವಿವರಿಸಿದರು ವೇದಿಕೆಯಲ್ಲಿ ಡಿ ಹರ್ಷೇಂದ್ರ ಕುಮಾರ್, ಡಿ ಸುರೇಂದ್ರ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.ಡಾ.ಶ್ರೀಧರ ಭಟ್...
ಜನ ಸ್ಪಂದನ ಸಭೆ ಬಗ್ಗೆ ಮಾಹಿತಿ ನೀಡದ ಕಾಶಿಪಟ್ಣ ಪಿಡಿಒ ಗೆ ನೋಟೀಸ್ ನೀಡಲು ಶಾಸಕ ಹರೀಶ್ ಪೂಂಜ ಸೂಚನೆ
ಬೆಳ್ತಂಗಡಿ: ಜನಸ್ಪಂದನ ಸಭೆಯ ಮಾಹಿತಿ ಪಂಚಾಯತ್ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಸರಿಯಾಗಿ ತಿಳಿಸದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಶೋಕಾಸ್ ನೋಟೀಸ್ ನೀಡುವಂತೆ ಶಾಸಕ ಹರೀಶ್ ಪೂಂಜ ಸೂಚಿಸಿದ ಘಟನೆಕಾಶಿಪಟ್ಣದಲ್ಲಿ ನಡೆದಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಕಾಶಿಪಟ್ಣ, ಗ್ರಾಮ ವ್ಯಾಪ್ತಿಯ ಜನ ಸ್ಪಂದನ ಸಭೆಯು ಕಾಶಿಪಟ್ಣ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನ 18 ರಂದು ನಡೆಯಿತು. ಸಭೆಯ ಪ್ರಾರಂಭದಲ್ಲೇ ಜನಸ್ಪಂದನ ಸಭೆಯ ಮಾಹಿತಿ ಪಂಚಾಯತ್ ಸದಸ್ಯರಿಗಾಗಲಿ ಗ್ರಾಮಸ್ಥರಿಗಾಗಲಿ ಸರಿಯಾಗಿ ತಿಳಿದಿಲ್ಲ ಈ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಗಿಂತ ಅಧಿಕಾರಿಗಳೇ ಹೆಚ್ಚಿದ್ದಾರೆ.ಇದು ಅಧಿಕಾರಿಗಳಿಗೋ...
ಚಾರಣಪ್ರಿಯರಿಗೆ ನ.20 ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ
ಬೆಳ್ತಂಗಡಿ; ಚಾರಣಪ್ರಿಯರಿಗೆ ನ. 20 ರಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.ಕಳೆದ ಹಲವು ತಿಂಗಳಿನಿಂದ ಕಾಡ್ಗಿಚ್ಚು ಭಯ,ಮಳೆಗಾಲ ಇತ್ಯಾದಿ ಕಾರಣಗಳಿಂದ ಸಾರ್ವಜನಿಕರಿಗೆ ಜಲಪಾತ ವೀಕ್ಷಣೆಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಪ್ರಸ್ತುತ ಮಳೆ ಕಡಿಮೆಯಾಗಿದ್ದು ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.ನೂರಾರು ಅಡಿ ಎತ್ತರದಿಂದ ನೀರು ಧುಮ್ಮಿಕ್ಕುವ ಬಂಡಾಜೆ ಜಲಪಾತ ಪ್ರದೇಶಕ್ಕೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಿಂದ ಚಾರಣದ ಮೂಲಕ ತಲುಪಬಹುದು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿರುವ ಈ ಜಲಪಾತಕ್ಕೆ ಹೋಗಬೇಕಾದರೆ 11 ಕಿ.ಮೀ.ದೂರವನ್ನು ಚಾರಣದ ಮೂಲಕವೇ ಕ್ರಮಿಸಿ ತಲುಪಬೇಕು.ಕಡಿರುದ್ಯಾವರದಿಂದ ಕಡಿದಾದ ಹಾದಿ, ಜಾರುವ ಬಂಡೆಗಳು,...














