ಗಾಂಜಾ ಪ್ರಕರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ; ಇಳಂತಿಲದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.2023ರ ಸೆಪ್ಟೆಂಬರ್ 2ರಂದುಬೆಳಗ್ಗೆ 10 ಗಂಟೆ ವೇಳೆಗೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ರಿಫಾಯಿನಗರದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಬಂಟ್ವಾಳ ತಾಲೂಕಿನ ಪೆರ್ನೆಯ ಸಲೀಂ ಹುಸೇನ್ ಮತ್ತು ಪೆರಾಜೆಯ ಶಹ್ಯಾಜ್ ಅಹಮ್ಮದ್ ಎಂಬವರನ್ನು ಉಪ್ಪಿನಂಗಡಿ ಎಸ್ಐ ಓಮನ ಎನ್.ಕೆ. ಮತ್ತು ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ ಉದ್ಘಾಟನೆ, ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತೆ, ಸಚಿವ ಎಂ.ಬಿ ಪಾಟೀಲ್
ಬೆಳ್ತಂಗಡಿ: ಎಲ್ಲ ಧರ್ಮಗಳೂ ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ ಪಾಟೀಲ್ ಅವರು ಹೇಳಿದರು.ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆಗೆ ಇಂತಹ ಸರ್ವ ಧರ್ಮಸಮ್ಮೇಳನಗಳು ಅವಕಾಶ ನೀಡುತ್ತದೆ. ಎಲ್ಲ ಧರ್ಮಗಳಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಮತ್ತೊಮ್ಮೆ ನೆನಪಿಸಲು ಇದು ಸಹಕಾರಿಯಾಗಿದೆ. ವಿಶ್ವಕ್ಕೆ ಭಾರತ ನೀಡುವ ಸಂದೇಶ ವಸುದೈವ...
ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು.ಅವರು ಮಂಗಳವಾರ ಪಾದಯಾತ್ರೆಯಲ್ಲಿ ಧರ್ಮಸ್ಥಳ ತಲುಪಿದಾಗ ಅವರನ್ನು ಪ್ರವೇಶದ್ವಾರದಿಂದ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ಕರೆತರಲಾಯಿತು. ಬಳಿಕ ಅವರು ಹೆಗ್ಗಡೆಯವರೊಂದಿಗೆ ಪಾದಯಾತ್ರೆ ಬಗ್ಯೆ ತನ್ನ ಅನುಭವ ಹಂಚಿಕೊಂಡರು.ದಾರಿಯುದ್ಧಕ್ಕೂ ಹೆಗ್ಗಡೆಯವರು ಹಾಗೂ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಜನರ ಶ್ರದ್ಧಾ-ಭಕ್ತಿ ಹಾಗೂ ಅಭಿಮಾನದ ಮಾತುಗಳನ್ನು...
ಪೈಂಟಿಗ್ ಕೆಲಸದ ವೇಳೆ ಕಟ್ಟಡದ ಮೇಲಿನಿಂದ ಬಿದ್ದು ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವು
ಬೆಳ್ತಂಗಡಿ :ನಿರ್ಮಾಣ ಹಂತದ ಮನೆಯ ಫೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಕಟ್ಟಡದ ಮೇಲಿನಿಂದಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಜಿರೆ ರೆಂಜಾಳ ನಿವಾಸಿ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ.17ರಂದು ನಡೆದಿದೆ. ಉಜಿರೆ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ತಿಂಗಳ ಹಿಂದೆ (ಅ.10 ರಂದು) ಕಣಿಯೂರು ಗ್ರಾಮದ ಪಣೆಕರ ಎಂಬಲ್ಲಿನ ನಿವಾಸಿ ಸುಧೀರ್ ರೈ ಎಂಬವರ ಮನೆಯ ಕೆಲಸಮಾಡುತ್ತಿದ್ದ ವೇಳೆ ಅವರು 15 ಅಡ್ಡಿ ಎತ್ತರದಿಂದ ನೆಲಕ್ಕೆ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಂಗಳೂರು...
ವೇಣೂರು ಪೊಲೀಸರ ಕಾರ್ಯಾಚರಣೆ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ವಾಹನ ವಶಕ್ಕೆ
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ದಿನಾಂಕ ಅ.2 ರಿಂದ ಅ. 6ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ ಸುಮಾರು 149 ಗ್ರಾಂ ತೂಕದ ಒಟ್ಟು 9,50,000/- ರೂ. ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ- 85/2025 500 331(1), 331(4), 305 2.2. 2. 2023 ರಂತೆ ಪ್ರಕರಣ ದಾಖಲಾಗಿರುತ್ತು. ಪ್ರಕರಣದ ತನಿಖೆ ನಡೆಸಲಾಗಿ, ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ, ಮಂಗಳೂರು,...
ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ-ಜನರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಸಭಾ ನಿಧಿ ಬಳಕೆ : ಡಾ ಹೆಗ್ಗಡೆ
ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ....
ಕನ್ಯಾಡಿ ಸ್ವಾಮೀಯವರಿಂದ ಹೆಗ್ಗಡೆಯವರ ಭೇಟಿ
ಧರ್ಮಸ್ಥಳ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿಸ್ವಾಮೀಜಿಯವರು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಪೂಜ್ಯ ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ. ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು. ಅರ್ಜಿಯನ್ನು ಭಾಗಶಃ ಮಾನ್ಯ...
ಬೆಳ್ತಂಗಡಿ: ಬೆಂಕಿ ಆಕಸ್ಮಿಕ ಸಂಭವಿಸಿದ ಸ್ವಸ್ತಿಕ್ ಗ್ಯಾರೇಜ್ ಗೆ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ: ನಗರದ ಹಳೆಕೋಟೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಆಕಸ್ಮಿಕದಲ್ಲಿ ಭಾರೀ ನಷ್ಟ ಸಂಭವಿಸಿದ ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೋಮವಾರ ಭೇಟಿ ನೀಡಿದರು. ಗ್ಯಾರೇಜ್ ಮಾಲಕರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡು ಸಾಂತ್ವನ. ಹೇಳಿದರು.
ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಶಾಸಕ ಹರೀಶ್ ಪೂಂಜಾ ವಿರೋಧಿಸುತ್ತಿದ್ದಾರೆ. ರಕ್ಷಿತ್ ಶಿವರಾಂ
ಬೆಳ್ತಂಗಡಿ.ಪೋಲಿಸ್ ಇಲಾಖೆಯಲ್ಲಿ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗುವಂತಾಗಲು ಮತ್ತು ಪೋಲಿಸ್ ಇಲಾಖೆಯ ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗ ಮಂಜೂರುಗೊಳಿಸಿದ್ದು , ಅದನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಲು ಬಿಡುವುದಿಲ್ಲ. ಬಿಜೆಪಿಗರ ಅಕ್ರಮ , ಅನಧಿಕೃತ ದಂಧೆಗಳಿಗೆ ಕಡಿವಾಣ ಬೀಳುವ ಭಯದಿಂದ ಬೆಳ್ತಂಗಡಿ ಪೋಲಿಸ್ ಉಪ ವಿಭಾಗವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಬಿಜೆಪಿಗರು ವಿರೋಧಿಸುತ್ತಿದ್ದಾರೆ ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ. ಪೋಲಿಸ್ ಇಲಾಖೆಯ ಬಲವರ್ಧನೆ ಮತ್ತು ವಿಸ್ತರಣೆಯ ಭಾಗವಾಗಿ ರಾಜ್ಯ ಸರ್ಕಾರ ಬೆಳ್ತಂಗಡಿ ಪೋಲಿಸ್...














