ಬೆಳ್ತಂಗಡಿ; ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು ಕೆಪಿಎಸ್ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ರಕ್ಷಿತ್ ಶಿವರಾಮ್
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸುದ್ದಾರೆ.ತಾಲೂಕಿನ ಎರಡು ಶಾಲೆಗಳನ್ನು ಕರ್ನಾಕ ಪಬ್ಲಿಕ್ ಸ್ಕೂಲ್ ಆಗಿ ಮೇಲ್ದರ್ಜೆಗೆ ಏರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಈ ಹಿಂದೆ ಮನವಿಯನ್ನು ಸಲ್ಕಿಸಲಾಗಿತ್ತು. ಈ ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ತಾಲೂಕಿನ ಮಚ್ಚಿನ, ಕೊರಂಜ ಪ್ರಾಥಮಿಕ ಶಾಲೆಗಳು...
ಮಹೇಶ್ ಶೆಟ್ಟಿ ಗಡಿಪಾರು ಪ್ರಕರಣ ಬಂಟ್ವಾಳ ಡಿ. ವೈ ಎಸ್.ಪಿ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್.ಟಿ ದೂರು
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶ ಮಾಡಲು ಸಹಾಯಕ ಆಯುಕ್ತರ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್. ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನೀತಿ ತಂಡದ ಜಯಂತ್ ಟಿ ಅವರು ಕರ್ನಾಟಕ ಲೋಕಾಯುಕ್ತಕ್ಕೆ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ, ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದಾರೆ.ಮಹೇಶ್ ಶೆಟ್ಟಿ ಅವರ ಗಡಿಪಾರು ಪ್ರಕರಣದ ವಿಚಾರಣೆವೇಳೆ ಬಂಟ್ವಾಳ ಡಿ ವೈ.ಎಸ್.ಪಿ ಅವರು ಪುತ್ತೂರು ಸಹಾಯಕ ಕಮಿಷನರ್ ಅವರ...
ಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ
ಬೆಳ್ತಂಗಡಿ : ಬಂದೂಕು ಪ್ರಕರಣ ಮತ್ತು ಗಡಿಪಾರು ಆದೇಶ ಪ್ರಕರಣದ ಬಳಿಕ ಕಳೆದ ಒಂದು ತಿಂಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿರುವಾಗ ತಿಮರೋಡಿ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಹೊರಗಡೆ ಗಿರೀಶ್ ಮಟ್ಟಣ್ಣವರ್ ಅ.11 ರಂದು ಮಾಧ್ಯಮಗಳ ಜೊತೆ ಮಾತಾನಾಡುವಾಗ 'ತಿಮರೋಡಿ ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ,ನಾನು ಇಂದೇ ಅವರಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದೆ ಇದ್ರೆ ಅದು ನನ್ನ ತಪ್ಪಾ' ಎಂದು...
ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶ...
ಮುಂಡಾಜೆ; ಭಾರೀ ಮಳೆಗೆ ಕುಸಿದ ಮೋರಿ ಗುಂಡ ದೈವಸ್ಥಾನದ ಸಂಪರ್ಕ ಕಡಿತ
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತ ಉಂಟಾಗಿದೆ.ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ.ಇದರಿಂದ ದೈವಸ್ಥಾನ ಸಹಿತ ಇಲ್ಲಿನ ನಾಲ್ಕಾರು ಮನೆಗಳಿಗೆ ಸಂಪರ್ಕ ಇಲ್ಲದಂತಾಗಿದೆ. ಸ್ಥಳೀಯರು ಪಕ್ಕದ ತೋಟಗಳಲ್ಲಿ ಸುತ್ತುಬಳಸಿನ ದಾರಿಯಲ್ಲಿ ನಡೆದುಕೊಂಡು ಹೋಗುವಂತಾಗಿದೆ.ಈ ಮಳೆಗಾಲದಲ್ಲಿ ಈ ಮೋರಿ ಕುಸಿತ ಕಾಣತೊಡಗಿತ್ತು. ಈ ಸಮಯ ಇದರ ದುರಸ್ತಿಗೆ ಮುಂಡಾಜೆ ಗ್ರಾಮ ಪಂಚಾಯಿತಿ ಮುಂದಾಗಿತ್ತು.ಆದರೆ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರದ್ದಾಗಿರುವ...
ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಹ ಹರೀಶ್ ಪೂಂಜ ಅವರಿಂದ ಅಧಿಕಾರಿಗಳೊಂದಿಗೆ ಸಭೆ, ಕಾಮಗಾರಿ ಆರಂಭಿಸಲು ಸೂಚನೆ
ಬೆಳ್ತಂಗಡಿ; ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಕೊನೆಗೂ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳ ಸಬೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ.ಕಾಮಗಾರಿ ಸ್ಥಗಿತಗೊಂಡು ಬಸ್ ನಿಲ್ದಾಣ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಬಗ್ಗೆ "ಬೆಳ್ತಂಗಡಿ ಸಮಾಚಾರ" ಸಮಗ್ರವಾದ ವರದಿಯನ್ನು ಪ್ರಸಾರ ಮಾಡಿತ್ತು.ಇದೀಗ ಶಾಸಕರು ಈ ಬಗ್ಗೆ ಕೊನೆಗೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಅರಣ್ಯ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿಕಾಮಗಾರಿಯನ್ನು ಮುಕ್ತಾಯಗೊಳಿಸುವ ಸಂಬಂಧ ಇರುವ ಅಡಚಣೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದುಕೊಂಡರು. ಸಮಸ್ಯೆಗಳನ್ನು ಪರಿಹರಿಸಿ...
ಬೆಳ್ತಂಗಡಿ : ಮದನ್ ಬುಗುಡಿ ಬೆಳ್ತಂಗಡಿ ಠಾಣೆಗೆ ಹಾಜರು
ಬೆಳ್ತಂಗಡಿ : ಗಿರೀಶ್ ಮಟ್ಟಣ್ಣನವರ್ ಅವರು ಮಾನವಹಕ್ಕುಗಳ ಅಯೋಗದ ಅಧಿಕಾರಿ ಎಂದು ಮಾಧ್ಯಮದ ಮುಂದೆ ಪರಿಚಯಿಸಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ರೌಡಿ ಶೀಟರ್ ಆಗಿರುವ ಮದನ್ ಬುಗುಡಿ ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಅ14ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ತಮ್ಮ ವಕೀಲರೊಂದಿಗೆ ಹಾಜರಾದರು. ಗಿರೀಶ್ ಮಟ್ಟಣ್ಣವರ್ ಅವರು ಮಾದ್ಯಮದ ಮುಂದೆ ಮಾತನಾಡಿದಾಗ ಮದನ್ ಬುಗುಡಿ ಅವರನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ್ದರು. ಈ ಬಗ್ಗೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ...
ಸುಳ್ಯ 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ
ಬೆಳ್ತಂಗಡಿ; 1990 ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವುವ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಾಲನ್(73) ನಾಟಿ ಮನೆ, ತ್ರಿಸ್ಸೂರ್ ಜಿಲ್ಲೆ ಕೇರಳ ಎಂಬಾತನು 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ತ್ರಿಸ್ಸೂರ್ ನಿಂದ ದಸ್ತಗಿರಿ ಮಾಡಿ ಅ.13 ರಂದು ಮಾನ್ಯ ನ್ಯಾಯಧೀಶರು...
ಬೆಳ್ತಂಗಡಿ; ಕನಿಷ್ಟ ಕೂಲಿಗಾಗಿ ಸಿ.ಐ.ಟಿ.ಯು ನೇತೃತ್ವದಲ್ಲಿ ಬೀಡಿ ಕಾರ್ಮಿಕರ ಬೃಹತ್ ಪ್ರತಿಭಟನೆ
ಬೆಳ್ತಂಗಡಿ; ಹಲವು ಜನರ ತ್ಯಾಗಮಯ ಹೋರಾಟದಿಂದ ಪಡೆದ ಕಾನೂನು ಸವಲತ್ತುಗಳನ್ನು ಮತ್ತು ಕನಿಷ್ಟ ವೇತನವನ್ನು ಇಲ್ಲವಾಗಿಸಲು ಮಾಲಕರು ನಡೆಸುವ ಶಡ್ಯಂತರಗಳ ವಿರುದ್ದ ಹೋರಾಟ ನಡೆಸಿ ನ್ಯಾಯ ಪಡೆಯಲು ಕಾರ್ಮಿಕರು ಸಿದ್ದರಾಗಬೇಕಿದೆ ಎಂದು ಕರ್ನಾಟಕ ರಾಜ್ಯ ಬೀಡಿಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ ಹೇಳಿದರು.ಬೀಡಿ ಕಾರ್ಮಿಕರ ವೇತನ ಬಾಕಿ ಮತ್ತು ಕನಿಷ್ಟ ವೇತನ ಜಾರಿ ಮಾಡದ ಬೀಡಿ ಮಾಲಕರ ಕಾರ್ಮಿಕ ವಿರೋದಿ ದೋರಣೆ ಖಂಡಿಸಿ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಬೆಳ್ತಂಗಡಿ ಜೆಪಿ ಬೀಡಿ ಕಂಪೆನಿ ಎದುರು ನಡೆದ ಬೀಡಿ ಕಾರ್ಮಿಕರ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವ ವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ ವಿಚಾರಣೆ ನಡೆಸಿದ್ದು ಆದೇಶವನ್ನು ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.















