ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ
ಬೆಳ್ತಂಗಡಿ; ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಡಿ 9 ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ ಮಹಿಳಾ ಕಬಡ್ಡಿ ವಿಶ್ವಕಪ್ ವಿಜೇತೆ ಧನಲಕ್ಷ್ಮಿ ಪೂಜಾರಿ ಅವರಿಗೆ ಅಭಿನಂದನೆ
ಬೆಂಗಳೂರು; ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.ಅಧಿವೇಶನ ವೀಕ್ಷಣೆಗೆ ಬಂದಿದ್ದ ಧನಲಕ್ಷ್ಮಿ ಪೂಜಾರಿ ಮತ್ತು ಅವರ ತರಬೇತುದಾರರನ್ನು ವಿಶೇಷವಾಗಿ ಸ್ವಾಗತಿಸಿ, ಅವರ ಸಾಧನೆಯನ್ನು ಗೌರವಿಸಲಾಯಿತು.ಈಗಾಗಲೇ ರಾಜ್ಯ ಸರ್ಕಾರ ಧನಲಕ್ಷ್ಮಿ ಅವರಿಗೆ ಐದು ಲಕ್ಷ ನಗದು ಪ್ರೋತ್ಸಾಹಧನ ನೀಡಿದೆ.
ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿಕೆ ಮಾಹಿತಿ
ಬಳಂಜ:ಸುಮಾರು 73 ವರ್ಷಗಳ ಹಿಂದೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿದ್ಯೆ ಸುಲಭದಲ್ಲಿ ದೊರಕಬೇಕು ಎಂಬ ದೂರದೃಷ್ಟಿಯಿಂದ ಗ್ರಾಮೀಣ ಪ್ರದೇಶದ ಬಳಂಜದ ಪಟೇಲರಾಗಿದ್ದ ಕಿನ್ನಿ ಯಾನೆ ಕೋಟಿ ಪಡಿವಾಳರು ಆಗ ಸಮಾಜದಲ್ಲಿ ಗುರುತಿಸಿ, ಗಣ್ಯರ ನೆರವಿನೊಂದಿಗೆ ಆರಂಭಿಸಿದ ಈ ಸಂಸ್ಥೆ ಸಾವಿರಾರು ಮಕ್ಕಳಿಗೆ ವಿದ್ಯೆಯನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ದಾರಿ ತೋರಿದೆ ಎಂದು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ ಹೇಳಿದರು. ಅವರು ಡಿ. 8ರಂದು ಬಳಂಜ ಶಾಲಾ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು ಈ...
ಪುತ್ತೂರು ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಕಾಫಿ ಬೀಜ ಕಳ್ಳತನ ಆರೋಪಿಗಳ ಬಂಧನ
ಬೆಳ್ತಂಗಡಿ; ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಕಾಫಿ ಬೀಜ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಆಶ್ಲೇಷ ಭಟ್, ನಾರಾಯಣ ಶೆಟ್ಟಿಗಾರ್, ಮಿಧುನ್ ಕುಮಾರ್, ವಿಕಯ ಶೆಟ್ಟಿ, ಮಹಮ್ಮದ್ ಆಶ್ರಫ್ ಎಂಬವರಾಗಿದ್ದಾರೆ.ಕಳವಾದ ಎಲ್ಲಾ 80 ಕಾಫಿ ಚೀಲಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.ಪಿರ್ಯಾದಿದಾರರಾದ ಪುತ್ತೂರು ಕಬಕ ನಿವಾಸಿ ತೃತೇಶ್ (29) ಅವರ ದೂರಿನಂತೆ, ಡಿ.3ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯಿಂದ ತಲಾ 60 ಕೆ.ಜಿ ತೂಕದ 320 ಬ್ಯಾಗ್ಗಳನ್ನು...
ಬೆಳಾಲು; ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ
ಬೆಳಾಲು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ ಡಿ. 8 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬೀಮಂಡೆ ಪ್ರದೇಶದಲ್ಲಿ ಕುಡಿಯುವ ನೀರು ಟ್ಯಾಂಕ್ ನಿರ್ಮಿಸಲಾಗಿದೆ ಆದರೆ ಇನ್ನೂ ನೀರು ಪೂರೈಕೆ ಆಗಿಲ್ಲ , ಬೆಳಾಲು - ಮಂಗಳೂರು ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ, ಬೆಳಾಲಿನಲ್ಲಿ ಲೋ ವಾಲ್ ಟೇಜ್ ಸಮಸ್ಯೆಯಿದೆ ಹಾಗೆಯೇ ವನ್ಯಜೀವಿಗಳ ಉಪಟಳವಿದೆ ಎಂದು ಗ್ರಾಮಸ್ಥ ಸುರೇಶ್ ಭಟ್ ಹೇಳಿದರು. ದೊಂಪದಪಲ್ಕೆ ಅಂಗನವಾಡಿ ಕೇಂದ್ರ ಆವರಣ...
ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ
ಬೆಳ್ತಂಗಡಿ : ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮ ಮುಗೇರಡ್ಕದ ಶ್ರೀ ಅಶೋಕ್ ಪಿ.ಎಲ್ ರವರಿಗೆ ಶಾಸಕರ ನಿವಾಸದಲ್ಲಿ ಡಿ. 08 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗೌರವಾರ್ಪಣೆ ಸಲ್ಲಿಸಿದರು.ದಿ. ಲಕ್ಷ್ಮಣ ಗೌಡ ಮತ್ತು ಕುಸುಮ ದಂಪತಿಯ ಪುತ್ರನಾದ ಅಶೋಕ್ ಪಿ ಲ್ ಇವರು ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ದರ್ಜೆ ಯಲ್ಲಿ ತೇರ್ಗಡೆ ಪಡೆದು, ಉತ್ತಮ ವಾಲಿಬಾಲ್ ಕ್ರೀಡಾಕೂಟವಾಗಿದ್ದು, ಇವರು 2003 ರಲ್ಲಿ ಭಾರತ...
ತಾಲೂಕಿನ ಕೃಷಿಕರಿಗೆ ₹- 48.28 ಕೋಟಿ ರೂ. ಬೆಳೆ ವಿಮೆ ಮಂಜೂರು – ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: 2024-25ನೇ ಸಾಲಿನ ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆಯ ಫಲಾನುಭವಿಗಳಿಗೆ 40,28,59,739 ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 23,705 ಮಂದಿ ಅಡಿಕೆ ಬೆಳೆಗಾರರಿಗೆ 38.99 ಕೋಟಿ ರೂಪಾಯಿ, 4,624 ಕಾಳು ಮೆಣಸು ಬೆಳೆಗಾರರಿಗೆ 1.28 ಕೋಟಿ ರೂಪಾಯಿ ಬೆಳೆ ವಿಮೆ ಜಮೆಯಾಗಿದೆ. ಸುಮಾರು 130 ಕೋಟಿ ರೂ. ಬೆಳೆ ವಿಮೆ ತಾಲೂಕಿನ ಕೃಷಿಕರಿಗೆ ಜಮೆಯಾಗಲಿದೆ.
ಸಿರಿಯನ್ ಕ್ಯಾಥೊಲಿಕ್ ಸಹಕಾರ ಸಂಘ ಅಧ್ಯಕ್ಷರಾಗಿ ಅನಿಲ್ ಉಪಾಧ್ಯಕ್ಷರಾಗಿ ಜಾರ್ಜ್ ಆಯ್ಕೆ
ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯು ಡಿ. 8ರಂದು ನಡೆದಿದ್ದು ಮುಂದಿನ 5ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಅವರು ದ್ವಿತೀಯ ಬಾರಿಗೆ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ನಿರ್ದೇಶಕರಾಗಿ ಸೆಬಾಸ್ಟಿನ್ ವಿ.ಟಿ, ಜೈಸನ್ ಪಿ.ಎಸ್., ಅಂದಾನಿ ಕೆ.ಡಿ., ಸೆಬಾಸ್ಟಿನ್ ಬಂಗಾಡಿ, ಬಿಜು ಪಿ.ಪಿ, ಬಾಬು ತೋಮಸ್, ಅಜಯ್ ಕೆ.ವಿ., ಸೆಭಾಸ್ಮಿನ್ ಪಿ.ಟಿ, ಚಾಕೋ ಎನ್.ಕೆ., ಸೋಫಿ ಜೋಸೆಫ್, ಫಿಲೋಮಿನಾ ವಿ. ಲಾಲಿ ಮಾಣಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ. ವಿ. ಕಾರ್ಯನಿರ್ವಹಿಸಿದರು.
ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಕೋಟಿ-ಚೆನ್ನಯ ಕ್ರೀಡಾಕೂಟ ಉದ್ಘಾಟನೆ
ಬೆಳ್ತಂಗಡಿ : 'ಶಿವಗಿರಿಯ ಶಾಖಾ ಮಠಕ್ಕೆ ರಾಜ್ಯದಲ್ಲಿ 5 ಎಕರೆ ಸ್ಥಳ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರು ತಿಳಿಸಿದ್ದು ಆ ಮಠ ಬೆಳ್ತಂಗಡಿ ತಾಲ್ಲೂಕಿನಲ್ಲಿ ಆಗುವಂತಾಗಬೇಕು. ತಾಲ್ಲೂಕಿನ ಪ್ರಮುಖ ವೃತ್ತದಲ್ಲಿ ಬಿಲ್ಲವ ಸಮಾಜದ ಶಕ್ತಿಯಾಗಿದ್ದ ಕೀರ್ತಿಶೇಷ ಕೆ. ವಸಂತ ಬಂಗೇರರ ಪುತ್ಥಳಿ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು' ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು. ಅವರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ...
ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕರ್ನಾಟಕ ಕ್ರಿಸ್ಟಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ; ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳ ಮಾಹಿತಿ ಕಾರ್ಯಾಕ್ರಮ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಸಮುದಾಯ ಭವನದಲ್ಲಿ ಡಿ.7 ಭಾನುವಾರ ನಡೆಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಯಶೋಧರ ಅವರು ಮಾಹಿತಿ ನೀಡಿ ನಿಗಮದಿಂದ ಇರುವ ಅರಿವು ಸಾಲಯೋಜನೆ, ವಿದೇಶೀ ವಿದ್ಯಾಭ್ಯಾಸ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಶ್ರಮ ಶಕ್ತಿ ಯೋಜನೆ, ಶ್ರಮ ಶಕ್ತಿ (ವಿಶೇಷ ಮಹಿಳೆ) ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ ನೇರ ಸಾಲ ಯೋಜನೆ,...















