ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ಸಲ್ಲಿಕೆ

0

ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ.ಮಹೇಶ್ ಶೆಟ್ಟಿ ಅವರ ಮನೆಯಲ್ಲಿ ಎಸ್.ಐ.ಟಿ‌ ಅಧಿಕಾರಿಗಳು ಶೋಧ ನಡೆಸಿದ ವೇಳೆ ಅಲ್ಲಿ ಒಂದು ಬಂದೂಕು ಹಾಗೂ ಎರಡು ತಲವಾರುಗಳು ಪತ್ತೆಯಾಗಿರುವುದಾಗಿ ಎಸ್.ಐ.ಟಿ ಅಧಿಕಾರಿಗಳು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿತ್ತು.ಈ ಪ್ರಕರಣದಲ್ಲಿ ಠಾಣೆಗೆ ಹಾಜರಾಗುವಂತೆ ಪೊಲೀಸರು ನೋಟೀಸ್ ನೀಡಿದ ಬೆನ್ನಲ್ಲಿಯೇ ಮಹೇಶ್ ಶೆಟ್ಟಿ ಅವರು ನಿರೀಕ್ಷಣಾ ಜಾಮೀನಿಗೆ ಮಂಗಳೂರಿನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು...

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಚಿನ್ನಯ್ಯ ಸಹೋದರಿ ಹಾಜರು

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ  ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದು‌ಎಸ್.ಐಟಿ ಅಧಿಕಾರಿಗಳು ಈಕೆಯ ವಿಚಾರಣೆ ನಡೆಸುತ್ತಿದ್ದಾರೆ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಚಿನ್ನಯ್ಯನ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ವಿಚಾರಣೆಗಾಗಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಳನ್ನು ಪಡೆಯಲು ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹಾಗೂ ಇತರ ವಿಚಾರಗಳನ್ನು ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎನ್ನಲಾಗಿದೆ.ಚಿನ್ನಯ್ಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿದ‌ವೇಳೆ ಆತನೊಂದಿಗೆ ಪತ್ನಿಯೂ ಇದ್ದಳು ಎಂದು ಸೌಜನ್ಯ ಪರ ಹೋರಾಟಗಾರರು ಹೇಳಿಕೆ ನೀಡಿದ್ದರು. ಅಲ್ಲಿ ಆತ ನೀಡಿದ ಹೇಳಿಕೆಗೆಯ ಬಗೆಗಿನ ವೀಡಿಯೋಗಳು...

ಬೆಳ್ತಂಗಡಿ : ನಿಡ್ಲೆಯಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಯತ್ನ; ಧರ್ಮಸ್ಥಳ ಪೊಲೀಸರಿಂದ ಮಧ್ಯ ಸಮೇತ ಆರೋಪಿಯ ಬಂಧನ

0

ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮಧ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಧರ್ಮಸ್ಥಳ ಪ್ರಭಾರ ಪಿಎಸ್ಐ ಸಿಕಂಧರ್ ಪಾಷಾ ಸಿಬ್ಬಂದಿಗಳೊಂದಿಗೆ ಕುದ್ರಾಯದ ಅಂಗಡಿಗೆ ದಾಳಿ ನಡೆಸಿ ಪರಿಶೀಲಿಸಿದಾಗ ಅಂಗಡಿಯ ಹೊರಗಡೆ ಹಿಂಬದಿಯಲ್ಲಿ ಗೋಣಿ ಚೀಲದ ಕಟ್ಟೊಂದು ಇದ್ದು, ಅದರ ಸಮೀಪ ಒಬ್ಬ ವ್ಯಕ್ತಿ ನಿಂತುಕೊಂಡಿದ್ದ ಸಾಂತಪ್ಪ ಎಂಬಾತನನ್ನು ವಶಕ್ಕೆ ಪಡೆದು ಸ್ಥಳದಲ್ಲಿ ಶೋಧನಾ ಕಾರ್ಯ ನಡೆಸಿದಾಗ ಆರೋಪಿಯನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದಾಗ ಅಕ್ರಮ...

ಗುರುವಾಯನಕೆರೆ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ(88)ನಿಧನ

0

ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ನಲ್ಲಿ ಮೈಸೂರು ವಿಭಾಗದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ.

0

ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುವಯಕ್ತಿಕವಾಗಿ “ಉತ್ತಮ ಸರ್ವಾಂಗೀಣ ಆಟಗಾರ”ಪ್ರಶಸ್ತಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆಈತ ಬೆಳ್ತಂಗಡಿ ತಾಲೂಕು  ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಹಾಗೂ...

ಧರ್ಮಸ್ಥಳ;  ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯ ರಿಂದ 666 ನೇ “ವಾತ್ಸಲ್ಯ ಮನೆ” ಹಸ್ತಾಂತರ

0

ಧರ್ಮಸ್ಥಳ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ೬೬೬ನೇ “ವಾತ್ಸಲ್ಯ ಮನೆ” ಹಸ್ತಾಂತರ ಮಾಡಿ ಫಲಾನುಭವಿಗಳಿಗೆ ಮಾಸಾಶನ ಮತ್ತು ಇತರ ಸವಲತ್ತುಗಳನ್ನು ವಿತರಿಸಿ ಆಶೀರ್ವಚನ ನೀಡಿದರು.ಅದ್ವೈತ ತತ್ವ ಪ್ರಸಾರ ಮಾಡಿದ ಆದಿ ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಸಾರ್ವಕಾಲಿಕವಾಗಿ ಅನ್ವಯವಾಗುವಂತಹ ಮೇಲಿನಂತೆ ಉಪದೇಶ ನೀಡಿದ್ದಾರೆ ಎಂದರು.ಸಾಧ್ಯವಾದಷ್ಟು...

ಕ್ರೈಸ್ಟ್ ಅಕಾಡೆಮಿಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ

0

ಬೆಳ್ತಂಗಡಿ; ರೋಟರಿ ಸಮುದಾಯ ದಳ ಮುಂಡಾಜೆ, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು, ಹಾಗೂ ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಸಮುದಾಯ ದಳ ಮುಂಡಾಜೆ ಇದರ ಅಧ್ಯಕ್ಷರಾದ ಪಿ.ಸಿ ಸೆಬಾಸ್ಟಿಯನ್ ಅವರು ನೆರವೇರಿಸಿ ಶುಭ ಹಾರೈಸಿದರು.ಕಾರ್ಯಕ್ರಮದ‌ ಅಧ್ಯಕ್ಷತೆಯನ್ನು ಕ್ರೈಸ್ಟ್ ಅಕಾಡಮಿಯ ಪ್ರಾಂಶುಪಾಲರಾದ ಜಾರ್ಜ್ ಸಿ.ಎಂ.ಐ ಅವರು ವಹಿಸಿ ಶುಭ ಹಾರೈಸಿದರು.ಮುಖ್ಯ ಅತಿಧಿಗಳಾಗಿ ಆಗಮಿಸಿದ್ದ ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಆನಂದ್ ಅವರು ಆಗಮಿಸಿ...

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಜನಸಾಮಾನ್ಯರ ಕಾಳಜಿಯೇ ಸರಕಾರದ ಧ್ಯೇಯ‌ ದಿನೇಶ್ ಗುಂಡೂರಾವ್

0

ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದರು."ಮುಖ್ಯಮಂತ್ರಿಸಿದ್ದರಾಮಯ್ಯನವರ ಹಸಿವು ಮುಕ್ತ ಕರ್ನಾಟಕ ಚಿಂತನೆಯಂತೆ ಇಂದಿರಾ ಕ್ಯಾಂಟೀನ್ ಗಳು ಅಗತ್ಯ ಸ್ಥಳಗಳಲ್ಲಿ ನಿರ್ಮಾಣಗೊಳ್ಳುತ್ತಿವೆ. ಪ್ರತಿದಿನ ಬದಲಾವಣೆ ಆಧಾರದಲ್ಲಿ...

ಎಸ್.ಐ.ಟಿ ಕಚೇರಿಗೆ ತೆರಳಿದ ಸೌಜನ್ಯ ತಾಯಿ ಕುಸುಮಾವತಿ, ಗಿರೀಶ್ ಮಟ್ಟಣ್ಣನವರ್ ಜಯಂತ್ ಹಾಗೂ ತಂಡ

0

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ‌ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ ಭಟ್, ಲಕ್ಷಣ್ ಗೌಡ, ಹಾಗೂ ಇತರರು ಶನಿವಾರ ಮಧ್ಯಾಹ್ನದ ವೇಳೆಗೆ ತೆರಳಿದ್ದಾರೆ. ಸೌಜನ್ಯ ಪ್ರಕರಣ ಸೇರಿದಂತೆ ವಿವಿಧ ಪ್ರಕ್ರಣಗಳ ಬಗ್ಗೆ ದೂರು ನೀಡಲು ಇವರು ತೆರಳಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದುವಬರಬೇಕಾಗಿದೆ.