ಮೂಡಬಿದಿರೆ : ತಲ್ವಾರ್ ಹಿಡಿದು ಯುವಕನಿಂದ ಭಯದ ವಾತಾವರಣ ಸೃಷ್ಟಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಯುವಕರು

0

ಮೂಡಬಿದಿರೆ : ಯುವಕನೊಬ್ಬ ತಲ್ವಾರ್ ಹಿಡಿದು ಮೂಡಬಿದಿರೆ ಬಸ್ ನಿಲ್ದಾಣದ ಸುತ್ತಮುತ್ತ ಜು‌.18 ರಂದು ಸಂಜೆ ಭಯದ ವಾತಾವರಣ ಸೃಷ್ಟಿಸಿ ಬಳಿಕ ಮೊಬೈಲ್ ಅಂಗಡಿಯೊಂದಕ್ಕೆ ಹೋಗಿ ತಲ್ವಾರ್ ತೋರಿಸಿ ಬೊಬ್ಬೆ ಹಾಕಿ ಮೊಬೈಲ್ ಕೊಡುವಂತೆ ಬೆದರಿಕೆ ಹಾಕಿದ್ದಾನೆ. ಮೊಬೈಲ್ ಅಂಗಡಿಯಲ್ಲಿ ತಲ್ವಾರ್ ಹಿಡಿದು ಬೆದರಿಕೆ ಹಾಕುವ ವೇಳೆ ಹೊರಗಡೆ ಇದ್ದ ಯುವಕರ ತಂಡವೊಂದು ಸಮಯ ಪ್ರಜ್ಞೆಯಿಂದ ಯುವಕನ ಕೈಯಿಂದ ತಲ್ವಾರ್ ಎಳೆದು ಹಿಡಿದು ಮೂಡಬಿದಿರೆ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಚಾರಣೆ ವೇಳೆ ತಲ್ವಾರ್ ಹಿಡಿದು ಬೆದರಿಸಿದ ಯುವಕ ಬಂಟ್ವಾಳ ತಾಲೂಕಿನ  ನಿವಾಸಿ ರಾಜೇಶ್ ಎಂದು ತಿಳಿದು ಬಂದಿದ್ದು...

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

0

ಬೆಳ್ತಂಗಡಿ : ತನ್ನ ಮನೆಯಿಂದ ಕೆಲಸದ ನಿಮ್ಮಿತ್ತ ಬಂದಿದ್ದ ಯುವಕನ ಬೈಕ್ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ನಗರದಲ್ಲಿ ನಡೆದಿದೆ‌. ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಬೇರ್ಕಲ ನಿವಾಸಿ ಸ್ವರೂಪ್ ಎಂಬಾತ ಜು.16 ರಂದು ಬೆಳಗ್ಗೆ 11 ಗಂಟೆಗೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಅಕ್ಷಯ ಜೆರಾಕ್ಷ್ ಅಂಗಡಿ ಪಕ್ಕದಲ್ಲಿ KA-21-V-8978 ನಂಬರಿನ ಬಜಾಜ್ ಸಿಟಿ 100 ಬೈಕ್ ಪಾರ್ಕಿಂಗ್ ಮಾಡಿ ಬೇರೆ ಕೆಲಸಕ್ಕೆಂದು ಹೋಗಿ ವಾಪಸ್ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗಲು 11:30 ಕ್ಕೆ ಬೈಕ್ ಬಳಿ ಬಂದಾಗ ಕಾಣಿಯಾಗಿತ್ತು. ಈ...

ಭಾರೀ ಮಳೆ ಮುನ್ಸೂಚನೆ ಜು.18 ಶನಿವಾರ ಶಾಲೆಗಳಿಗೆ ರಜೆ ಘೋಷಣೆ

0

ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 18, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ವಸತಿ ಪದವಿ ಪೂರ್ವ ಕಾಲೇಜುಗಳಿಗೆ (12ನೇ...

ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ

0

ಬೆಳ್ತಂಗಡಿ; ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸರಹದದ್ದಿನಲ್ಲಿರುವ ಕುದುರೇಮುಖ‌ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ ದಿಡುಪೆ-ಸಂಸೆ ರಸ್ತೆಯಲ್ಲಿ ಅನಧಿಕೃತವಾಗಿ ಸಂಚರಿಸಿ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟವರ ವಿರುದ್ಧ ಅರಣ್ಯ ಇಲಾಖೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಿದೆ.ದಿಡುಪೆ- ಸಂಸೆ ರಸ್ತೆಯಲ್ಲಿ ವನ್ಯಜೀವಿಗಳ ಓಡಾಟ, ಅಪಾಯಕಾರಿ ತೊರೆ, ಹಳ್ಳಗಳು ಇವೆ. ಅಲ್ಲದೆ ಮಳೆಗಾಲದಲ್ಲಿ ಈ ರಸ್ತೆ ಅತ್ಯಂತ ದುರ್ಗಮ ಹಾಗೂ ಅಪಾಯಕಾರಿಯಾಗಿದೆ .ಈ ಕಾರಣದಿಂದ ಇಲ್ಲಿನ ಸ್ಥಳೀಯ ಜನರಿಗೆ ಮಾತ್ರ ಪ್ರಸ್ತುತ ಸಂಚಾರಕ್ಕೆ ಅವಕಾಶವಿದೆ‌. ಪ್ರವಾಸಿಗರಿಗೆ ಈ ರಸ್ತೆಯ ಮೂಲಕ...

ಆರೋಗ್ಯ ಸಚಿವ ಯು.ಟಿ. ಖಾದರ್ ಧರ್ಮಸ್ಥಳ ಭೇಟಿ

0

ಬೆಳ್ತಂಗಡಿ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.

ಚೊಚ್ಚಲ ಪ್ರಯತ್ನದಲ್ಲೇ ರಾಜ್ಯದ ಗಮನ ಸೆಳೆದ ವಿದ್ವತ್ ನ ನೀಟ್ ಫಲಿತಾಂಶಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

0

ಬೆಳ್ತಂಗಡಿ: CET ಮತ್ತು JEE ಫಲಿತಾಂಶದಲ್ಲಿ ರಾಜ್ಯಕ್ಕೆ 7 ನೇ Rank ತಂದು ಗಮನ ಸೆಳೆದಿದ್ದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು, ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NTA ಗುರುವಾರ NEET UG ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ ನಡೆದ ಪರೀಕ್ಷೆಯಲ್ಲೂ ಉತ್ತಮ‌ಸಾಧನೆ ಮಾಡಿದೆ. ಪ್ರಪ್ರಥಮ ಬಾರಿಗೆ ಕಾಲೇಜಿನಿಂದ 3 ವಿದ್ಯಾರ್ಥಿಗಳು AIIMS ಗೆ ಅರ್ಹತೆ ಪಡೆಯಲು ಬೇಕಾದ ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ವಿದ್ವತ್ ಪಿಯು ಕಾಲೇಜಿನ ಸಂಪತ್ ಕುಮಾರ್ ಪುಟ್ಟಿ ರಾಷ್ಟ್ರಮಟ್ಟದಲ್ಲಿ 1059 Rank ನೊಂದಿಗೆ 99.8531423 ಪರ್ಸೆಂಟೈಲ್ ಗಳಿಸಿದ್ದು,...

ಮಂಗಳೂರು; ದರೋಡೆ ಪ್ರಕರಣ ನೇಪಾಳ ಮೂಲದ ಮೂವರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ

0

ಮಂಗಳೂರು: ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಬರ್ಕೆ ಪೊಲೀಸರು, ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲಕ್ಕೆ ಸೇರಿದ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಗಳನ್ನು ತಿಲಕ್ ಕುಮಾರ್ ಖಡ್ಕ (36), ಅಶೋಕ್ ರಾಜ್ ಅಲಿಯಾಸ್ ಅಶೋಕ್ ಸಿಂಗ್ (33) ಹಾಗೂ ದಿಪೆಂರ್ದ ರಸೈಲಿ (25) ಎಂದು ಗುರುತಿಸಲಾಗಿದೆ. ಮೂವರೂ ನೇಪಾಳ ಮೂಲದವರಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ. ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯಲ್ಲಿರುವ ಮನೆಯೊಂದರಲ್ಲಿ...

ಬೆಳ್ತಂಗಡಿ; ಉಪ ನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ‌ ಸ್ವೀಕಾರ

0

ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಾಣ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಬೆಳ್ತಂಗಡಿಯಲ್ಲಿ ಸ್ವತಂತ್ರ ಉಪನೋಂದಣಾಧಿಕಾರಿಯಾಗಿ ಅಧಿಕಾರ‌ಸ್ವೀಕರಿಸಿದ್ದಾರೆ

ನೆರಿಯ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಚಿರತೆ ಜನರಲ್ಲಿ ಆತಂಕ

0

ಬೆಳ್ತಂಗಡಿ: ನೆರಿಯ ಗ್ರಾಮದ ಎಸ್ಟೇಟ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ.ಕಾರಿನಲ್ಲಿ ಹೋಗುತ್ತಿದ್ದ ವೇಳೆ ಎಸ್ಟೇಟ್ ಒಳಗೆ  ದೊಡ್ಡಗಾತ್ರದ ಚಿರತೆ ಕಾಣಿಸಿದೆ, ಜನರನ್ನು ನೋಡಿ ಚಿರತೆ ಒಳಕಾಡಿನತ್ತ ಓಡಿದೆ.ಕೆಲವು ತಿಂಗಳುಗಳ ಹಿಂದೆ ನೆರಿಯದ ಇದೇ ಪರಿಸರದಲ್ಲಿ‌ ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆ ಕಾಣಿಸಿಕೊಂಡಿತ್ತು. ತಾಲೂಕಿನಲ್ಲಿ ನಿರಂತರ ಚರತೆಯ ಹಾವಳಿ;ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಹಾವಳಿ ನಿರಂತರವಾಗಿ ಮುಂದುವರಿದಿದೆ. ಕೆಲ ದಿನಗಳ ಹಿಂದೆ ಬೆಳಾಲು ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಾರ್ಮಾಡಿ ಘಾಟಿಯಲ್ಲಿ ಚಿರತೆ ಕಾಣಿಸಿಕೊಂಡು ವಾಹನ ಸವಾರರಲ್ಲಿ ಆತಂಕ‌ಮೂಡಿಸಿತ್ತು. ಮುಂಡಾಜೆ, ಕಲ್ಮಂಜ ಪರಿಸರದಲ್ಲಿಯೂ ನಿರಂತರ...

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

0

ಬೆಳ್ತಂಗಡಿ : 19 ಮಂದಿ ಅರಣ್ಯಾಧಿಕಾರಿಗಳನ್ನು (RFO) ಸರಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.ಮಂಗಳೂರು ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ (RFO) ಟಿ. ಎನ್. ತ್ಯಾಗರಾಜ್ ಅವರನ್ನು ಬೆಂಗಳೂರು ಗ್ರೇಟರ್ ಪ್ರಾಧಿಕಾರ (ಕೇಂದ್ರ ವಲಯ) ಕ್ಕೆ ವರ್ಗಾವಣೆ ಮಾಡಲಾಗಿದ್ದು. ತೆರವಾದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ(RFO) ಜಾಗಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಭಾಗದ ಕ್ಯಾದಗಿ ವಲಯ ಅರಣ್ಯಾಧಿಕಾರಿ ಮಹೇಶ್ ಎಂ ದೇವಾಡಿಗ ಅವರನ್ನು ನೇಮಕ ಮಾಡಿ ಬೆಂಗಳೂರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೇ.28 ರಂದು ಆದೇಶ ಹೊರಡಿಸಿದ್ದರು. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಟಿ....