ತೋಟತ್ತಾಡಿ ಗಾಳಿ ಮಳೆಗೆ ವ್ಯಾಪಕ ಕೃಷಿ ಹಾನಿ ಶಾಸಕ ಹರೀಶ್ ಪೂಂಜ ಭೇಟಿ ಪರಿಶೀಲನೆ
ಬೆಳ್ತಂಗಡಿ; ತೋಟತ್ತಾಡಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಭಾರೀ ಗಾಳಿ ಮಳೆಗೆ ಕೃಷಿಗೆ ಹಾಗೂ ಮನೆಗಳಿಗೆ ವ್ಯಾಪಕವಾಗಿ ಹಾನಿ ಸಂಭವಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಈ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯಾಗಿರುವುದನ್ನು ವೀಕ್ಷಿಸಿದರು ಸಂತ್ರಸ್ತರೊಂದಿಗೆ ಮಾತು ಕತೆ ನಡೆಸಿದ ಅವರು ಹಾನಿಯಾಗಿರುವ ಬೆಳಗೆ ಕೂಡಲೇ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉರುವಾಲು ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ
ಉರುವಾಲು: ಫೆ 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2.50ಲಕ್ಷದ ಡಿ.ಡಿ ವಿತರಣೆಯನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್.ಡಿ ಹಾಗೂ ಯೋಜನಾಧಿಕಾರಿವರಾದ ಅಶೋಕ್ ರವರು ವಿತರಣೆ ಮಾಡಿದರು.ಈ ಸಂಧರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು ಯೋಗೀಶ್ ಪೂಜಾರಿ ಕಡ್ತಿಲ,ಕಾರ್ಯಾಧ್ಯಕ್ಷರು ಸುನಿಲ್ ಅಣವು ,ಜೀರ್ಣೋಧಾರ ಸಮಿತಿ ಅಧ್ಯಕ್ಷರು ದಾಸಪ್ಪ ಗೌಡ ಕೋಡಿಯಡ್ಕ,ಆಡಳಿತ ಸಮಿತಿ ಅಧ್ಯಕ್ಷರು ಕೊರಗಪ್ಪ...
ಬೆಳ್ತಂಗಡಿ : ಆಂಬ್ಯುಲೆನ್ಸ್ ವಾಹನದಲ್ಲಿ ಗಂಡು ಮಗುವಿಗೆ ಜನ್ಮ ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಸಿಸ್ಟರ್ ಗಳು
ಬೆಳ್ತಂಗಡಿ : ಹೆರಿಗೆಗಾಗಿ ಮಂಗಳೂರು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಹೋಗುತ್ತಿದ್ದಾಗ ದಾರಿ ಮಧ್ಯೆ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಫೆ.23 ರಂದು ಬೆಳಗ್ಗಿನ ಜಾವ ಹೆರಿಗೆಗೆಂದು ಬಂದಿದ್ದ ಬೆಳ್ತಂಗಡಿ ನಗರದ ಸುದೆಮುಗೇರು ನಿವಾಸಿ ಲೀಲಾವತಿ ಎಂಬ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು.ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ವೈದ್ಯರ ಸೂಚನೆ ಮೇರೆಗೆ ಇಬ್ಬರು ಶುಶ್ರೂಶಕಿಯರ ಜೊತೆಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ತುರ್ತು ವಾಹನದಲ್ಲಿ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು. ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಮಹಿಳೆಗೆ ವಿಪರೀತ ಹೆರಿಗೆ ನೋವು...
ತಾಲೂಕಿನ ಹಲವೆಡೆ ಮಳೆ ಕಕ್ಕಿಂಜೆ ಬಸ್ತಿಯಲ್ಲಿ ಮುರಿದು ಬಿದ್ದ ಮರ ಹಾಗೂ ವಿದ್ಯುತ್ ಕಂಬಗಳು
ಬೆಳ್ತಂಗಡಿ; ತಾಲೂಕಿನ ವಿವಿದೆಡೆಗಳಲ್ಲಿ ಶನಿವಾರ ಅಪರಾಹ್ನ ವೇಳೆ ಗಾಳಿ ಗುಡುಗು ಸಿಡಿಲಿನೊಂದಿಗೆ ಮಳೆ ಸುರಿದಿದೆ.ಕಕ್ಕಿಂಜೆ, ನೆರಿಯ ಚಾರ್ಮಾಡಿ, ಕಳೆಂಜ, ನಾರಾವಿ ಧರ್ಮಸ್ಥಳ, ಬದ್ಯಾರು, ನಡ ಪರಿಸರದಲ್ಲಿ ಮಳೆ ಸುರೊದಿದೆ ಕೆಲವೆಡೆ ದೊಡ್ಡ ಮಳೆ ಸುರಿದರೆ ಮತ್ತೆ ಕೆಲವೆಡೆ ಸಾಧಾರಣ ಮಳೆ ಸುರಿದಿದೆ.ಕಕ್ಕಿಂಜೆ ಬಸ್ತಿ ಸಮೀಪ ಗಾಳಿ ಮಳೆಗೆ ಭಾರೀಗಾತ್ರದ ಮರವೊಂದು ವಿದ್ಯುತ್ ಲೈನ್ ನ ಮೇಲೆ ಬಿದ್ದು ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೃತ್ಯು
ಬೆಳ್ತಂಗಡಿ; ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25) ಎಂಬವರಾಗಿದ್ದಾರೆ. ಫೆ. 14ರಂದು ಬೆಂಗಳೂರಿನ ಬೆಳ್ಳೂರ್ ಕ್ರಾಸ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಮೃತರು ತಂದೆ ತಾಯಿ ಪತ್ನಿ ಹಾಗೂ ಮಗುಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ
ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ
ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ ನಿವಾಸಿ ಸಂಜೀವ (50) ಎಂದು ತಿಳಿದು ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಉಜಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ ಕಂದಾಯ ನಿರೀಕ್ಷಕ ಹೆಚ್. ಆರ್ ಪ್ರದೀಶ್ ಉಪ ತಹಶೀಲ್ದಾರ್ ಪದೋನ್ನತಿ
ಬೆಳ್ತಂಗಡಿ ಹೋಬಳಿ ಕಂದಾಯ ನಿರೀಕ್ಷಕರಾಗಿದ್ದ ಹೆಚ್.ಆರ್ ಪ್ರತೀಶ್ ರವರು ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿ ಬಂಟ್ವಾಳ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ 2002 ರಲ್ಲಿ ಗ್ರಾಮಕರಣಿಕರಾಗಿ ನಾರಾವಿ ಗ್ರಾಮದಲ್ಲಿ ಸರಕಾರಿ ಸೇವೆ ಆರಂಬಿಸಿ ಬಡಗಕಾರಂದೂರು , ಉರುವಾಲು , ಕಣಿಯೂರು , ಬಂದಾರು ಗ್ರಾಮಗಳಲ್ಲಿ ಸೇವೆ ಸಲ್ಲಿಸಿ 2015 ರಲ್ಲಿ ಪದನ್ನೊತಿ ಹೊಂದಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಸೇವೆ ಸಲ್ಲಿಸಿದ ನಂತರ 2016 ರಲ್ಲಿ ವೇಣೂರು ಹೋಬಳಿ ಕಂದಾಯ ನಿರೀಕ್ಷಕರಾಗಿ , ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷರಾಗಿ 2020 ರ ನಂತರ...
ಬೈಪಾಡಿ : ಕಚ್ಚಾ ಸ್ಪೋಟಕ ಬ್ಲಾಸ್ಟ್ ಪ್ರಕರಣ ಬಾಂಬ್ ಸ್ಕಾಡ್ ಹಾಗೂ ಪೊಲೀಸರಿಂದ ಪರಿಶೀಲನೆ
ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ವಸ್ತುವನ್ನುಸ್ಫೋಟಕವೆಂದು ಗೊತ್ತಿಲ್ಲದೆಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡುಬಾಲಕ ಗಾಯಗೊಂಡ ಘಟನೆ ಸಂಭವಿಸಿದ ಮನೆಗೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಹಾಗೂಬಾಂಬ್ ಸ್ಕ್ಯಾಡ್ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತ ಮನೆಯಂಗಳದಲ್ಲಿ ಬುಧವಾರ ಸಂಜೆ ಸಂಭವಿಸಿದ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ...
ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್, ಡಿವೈಎಸ್.ಪಿ ಎಂ ಆರ್ ಹರೀಶ್ ಅವರಿದ್ದಾರೆ.2022 ರ ಡಿ18 ರಂದು ಶಿಬಾಜೆಯಲ್ಲಿ ಆತ ಕೆಲಸಮಾಡುತ್ತಿದ್ದ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ ಕೇಳಿ ಬಂದಿತ್ತು ಈ...
ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ
ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾತ್ರಿ ಗಂಟೆ 7.30ರ ನಂತರ ಚಂದ್ರಗ್ರಹಣ ಮುಕ್ತಾಯವಾದ ಬಳಿಕ ದೇವಸ್ಥಾನದ ಶುದ್ಧೀಕರಣ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನಗಳು ಮುಗಿದ ನಂತರ ದೇವರ ದರ್ಶನಕ್ಕೆ ಅವಕಾಶವಿದೆ.ದೂರದ ಊರುಗಳಿಂದ ಬರುವ ಭಕ್ತರು ದೇವರ ದರ್ಶನದ ಸಮಯ ವ್ಯತ್ಯಯವನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.















