ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ; ರಕ್ಷಿತ್ ಶಿವರಾಂ
ಬೆಳ್ತಂಗಡಿ: ಬಿ.ಸಿ ರೋಡಿನಲ್ಲಿ ನಡೆದ ಯುವತಿಯ ಬರ್ಬರ ಹತ್ಯೆ ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಘಟನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಹೇಯ ಕೃತ್ಯಗಳು ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುತ್ತವೆ. ಮಹಿಳೆಯರ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ತ್ವರಿತ ಹಾಗೂ ನಿಷ್ಪಕ್ಷಪಾತ...
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಕೊಲೆ ಆರೋಪಿ ಬೆಳ್ತಂಗಡಿಯ ಚೇತನ್ ಗೌಡ ನಿಗಾಗಿ ಹುಡುಕಾಟ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಈ ಬಗ್ಗೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆ ಮಾಡಿದ ಯುವಕನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.ಪೊಲೀಸ್ ಮಾಹಿತಿ ಪ್ರಕಾರ ಕೊಲೆ ಮಾಡಿದ ಯುವಕ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪುರುಷೋತ್ತಮ ಗೌಡ ಮಗ ಚೇತನ್ ಗೌಡ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ....
ಬಂಟ್ವಾಳ; ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಕತ್ತಿಯಿಂದ ಕಡಿದು ಯುವತಿಯ ಕೊಲೆ; ಆರೋಪಿ ಪರಾರಿ
ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಕ್ಕೆಪದವು ನಿವಾಸಿ ಲಾವಣ್ಯ(25) ಮೃತ ಯುವತಿಯಾಗಿದ್ದಾಳೆಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ,...
ಬೆಳ್ತಂಗಡಿ; ಖೋಟಾ ನೋಟು ತಯಾರಿ ಕೇಂದ್ರದ ಮೇಲೆ ದಾಳಿ ಸ್ಥಳೀಯರು ಇಬ್ಬರು ಸೇರಿ 7 ಮಂದಿ ಬಂಧನ
ಬೆಳ್ತಂಗಡಿ: ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದಲ್ಲಿ ನಡೆಯುತ್ತಿದ್ದ ನಕಲಿ ಖೋಟಾನೋಟು ಪ್ರಿಂಟ್ ಮಾಡಿ ಮಾರಾಟ ಮಾಡಲು ತಯಾರು ನಡೆಸುತ್ತಿದ್ದ ಕಟ್ಟಡವೊಂದಕ್ಕೆ ಜು.15 ರಂದು ರಾತ್ರಿ ಸುಮಾರು ಮಧ್ಯರಾತ್ರಿ 1 ಗಂಟೆಗೆ ಉಪ್ಪಿನಂಗಡಿ ಪೊಲೀಸರ ನೇತೃತ್ವದ ತಂಡ ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಟ್ಟಡದೊಳಗೆ 500 ಮುಖಬೆಲೆಯ ನೋಟು -1 ಮತ್ತು A-4 ಸೈಜ್ ಹಾಳೆಯಲ್ಲಿ ಪ್ರಿಂಟ್ ಮಾಡಲಾದ 500 ರೂ ಮುಖ ಬೆಲೆಯ ನೋಟುಗಳಂತೆ ಕಾಣುವ A-4 ಸೈಜ್ ಹಾಳೆಗಳು-21, 1) BENQ...
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬೆಳ್ತಂಗಡಿಯ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ
ಬೆಳ್ತಂಗಡಿ; “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರುಗಳ ವಶದಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಪ್ರಕರಣದ ವಿವರ ದಿನಾಂಕ: 25-06-2026 ರಂದು ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಮಾದಕ ವಸ್ತುವನ್ನು […]
ಉಜಿರೆ; ಅಪರಿಚಿತ ಶವ ಪತ್ತೆ
ಬೆಳ್ತಂಗಡಿ; ಉಜಿರೆ ಬಸ್ ನಿಲ್ದಾಣದ ಸಮೀಪದ ಶೌಚಾಲಯದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಜು 16 ರಂದು ಪತ್ತೆಯಾಗಿದೆ.ಸುಮಾರು 50 ರಿಂದ 55 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಇದಾಗಿದ್ದು ಅನಾರೋಗ್ಯ ಅಥವಾ ಇನ್ಯಾವುದೋ ಕಾರಣದಿಂದ ಈ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅನುಮಾನಿಸಲಾಗಿದೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ
ಬೆಳ್ತಂಗಡಿ : ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ; ಮುಸ್ತಾಕ್ ಜೊತೆಯಲ್ಲಿದ ಕಳ್ಳನ ಬಂಧಿಸಿದ ಪೊಲೀಸರು
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್. ಎಲ್. ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್(36) ಎಂಬಾತನನ್ನು ತನಿಖೆ ನಡೆಸಿ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಕಾಶಿಪಟ್ಣದಲ್ಲಿ ಜು.14 ರಂದು ಸಂಜೆ ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ...
ಅರವಿಂದ ಹೆಬ್ಬಾರ್ ಮುಂಡಾಜೆ ಅವರಿಗೆ ಬಿ.ಟಿ ರಂಜನ್ ಪ್ರಶಸ್ತಿ
ಪುತ್ತೂರು; ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಬಿ.ಟಿ.ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಧರ್ಮಸ್ಥಳ ಪ್ರಕರಣ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಮಾಡಿದ SIT
ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ 3,923 ಪುಟಗಳ 'ಸುಳ್ಳು ಸಾಕ್ಷ್ಯ' (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು.ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ...
ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಒತ್ತಾಯಿಸಿ ಕುಚ್ಚಲು ಅಕ್ಕಿ ವಿತರಿಸಿ ಎಸ್ಡಿಪಿಐಯಿಂದ ಸಾಂಕೇತಿಕ ಪ್ರತಿಭಟನೆ
ಬೆಳ್ತಂಗಡಿ, ಜು.15: "ನಮ್ಮ ಆಹಾರ – ನಮ್ಮ ಹಕ್ಕು, ಕರಾವಳಿಯ ತಟ್ಟೆಗೆ ಕುಚ್ಚಲು ಬೇಕು" ಎಂಬ ಘೋಷಣೆಯೊಂದಿಗೆ ಪಡಿತರ ವ್ಯವಸ್ಥೆಯ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ವತಿಯಿಂದ ಬುಧವಾರ ಬೆಳ್ತಂಗಡಿಯ ನ್ಯಾಯಬೆಲೆ ಅಂಗಡಿಗಳ ಮುಂಭಾಗ ಸಾಂಕೇತಿಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕರಾವಳಿ ಭಾಗದ ಸಾವಿರಾರು ಕುಟುಂಬಗಳ ಆಹಾರ ಪದ್ಧತಿಯಲ್ಲಿ ಕುಚ್ಚಲು ಅಕ್ಕಿಗೆ ವಿಶೇಷ ಸ್ಥಾನವಿದೆ. ಸ್ಥಳೀಯರ ಆಹಾರ ಸಂಸ್ಕೃತಿ ಹಾಗೂ ಜೀವನಶೈಲಿಗೆ...















