ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.
ನೇತ್ರಾವತಿ ಸ್ನಾನಘಟ್ಟದ 11ನೆಯ ಸ್ಥಳದಲ್ಲಿ ಹುಡುಕಾಟ ಆರಂಭಿಸಿದ ಎಸ್.ಐ.ಟಿ
ಬೆಳ್ತಂಗಡಿ;ನೇತ್ರಾವತಿ ಸ್ನಾನಘಟ್ಟದ ಸಮೀಪ ಅನಾಮಿಕನ ಹೇಳಿಕೆಯ ಮೇರೆಗೆ ಕಳೆಬರಕ್ಕಾಗಿನ ಹುಡುಕಾಟ ಕಾರ್ಯಾಚರಣೆ ಏಳನೆ ದಿನವಾದ ಮಂಗಳವಾರ ಆರಂಭವಾಗಿದೆ.ಇಂದು ಸಾಕ್ಷಿ ದೂರು ದಾರ ಈ ಹಿಂದೆ ಗುರುತಿಸಿದ್ದ 11ನೆಯ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.ಸೋಮವಾರ ಈತ ತೋರಿಸಿದ ಪ್ರದೇಶದಲ್ಲಿ ಕಳೆಬರ ಲಭ್ಯವಾಗಿತ್ತು ಈ ಹಿನ್ನಲೆಯಲ್ಲಿ ಈತ ಈ ಹಿಂದೆ ಗುರುತಿಸಿದ 11ನೆಯ ಸ್ಥಳದಲ್ಲಿಯೇ ಇಂದು ಹುಡುಕಾಟ ಆರಂಭಿಸಿದ್ದಾರೆ. ಉಳಿದಂತೆ ಇನ್ನೂ ಹಲವಡೆ ಇರುವುದಾಗಿ ಆತ ಹೇಳಿದ್ದರೂ ಅದರ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಲಿರುವುದಾಗಿ ಎಸ್.ಐ.ಟಿ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ 11.30 ರ ಸುಮಾರಿಗೆ ಎಸ್.ಐ.ಟಿ ತಂಡ...
ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಎಮ್. ಟಿ ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ 26 ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿಕಾರ್ ಜನರಲ್ ಫಾ. ಜೋಸೆಫ್ ವಲಿಯಪ ರಂಬಿಲ್ ಸೆಬಾಸ್ಟಿಯನ್ ಪಿ.ಸಿ, ಹಾಗೂ ಇತರರು ಇದ್ದರು.
ಬೆಳ್ತಂಗಡಿ : 6 ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 31 ರಂದು ದೂರುದಾರ ಆರನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. SIT ಗೆ ಹಸ್ತಾಂತರ: ಅಸ್ಥಿಪಂಜರ ಪತ್ತೆಯಾದ ಕಳೇಬರಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 6 ನೇ ಗುರುತು ಮಾಡಿದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ...
ಪದ್ಮಲತಾ ಮನೆಗೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ನೇತೃತ್ವದ ನಿಯೋಗ ಭೇಟಿ; ಮರು ತನಿಖೆಗೆ ಒತ್ತಾಯ
ಬೆಳ್ತಂಗಡಿ: ದಶಕಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸಿಪಿಐಎಂ ಮುಖಂಡ ದೇವಾನಂದ ಅವರ ಮಗಳು ಪದ್ಮಲತಾಳ ಮನೆಗೆ ಸಿಪಿಐ ಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಪ್ರಕಾಶ್ ನೇತೃತ್ವವ ತಂಡ ಭೇಟಿ ನೀಡಿ ಪದ್ಮಲತಾಳ ತಾಯಿ ಹಾಗೂ ಸಹೋದರಿ ಹಾಗೂ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಈ ಪ್ರಕರಣದ ಬಗ್ಗೆ ಮುಂದಿನ ತನಿಖೆಗಳಿಗೆ ಒತ್ತಾಯಿಸುವ ಕುರಿತು ಮನೆಯವರೊಂದಿಗೆ ಮಾತುಕತೆ ನಡೆಸಿದರು.ಬಳಿಕ ಬೆಳ್ತಂಗಡಿ ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಪಿಐ.ಎ ರಾಜ್ಯ ಕಾರ್ಯದರ್ಶಿ ಪ್ರಕಾಶ್ ಕೆ ಇದೀಗ ಅನಾಮಿಕ ನೀಡಿದ ಹೇಳಿಕೆಯ ಹಿನ್ನಲೆಯಲ್ಲಿ ರಚನೆಯಾಗಿರುವ...
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಯುವನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಪದ್ಮನಾಭ ಸಾಲ್ಯಾನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಈ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತೆ ಕರೆ ನೀಡಿದರು. ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾoಶುಪಾಲರಾದ...
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್ .ಬಿ. ನರೇಂದ್ರ ಕುಮಾರ್ ನಿಧನ
ಉಜಿರೆ : ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್. ಬಿ. ನರೇಂದ್ರ ಕುಮಾರ್ (81) ಸೋಮವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಮಗಳು ಇದ್ದಾರೆ.ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದ ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿಯೂ ಚಿರಪರಿಚಿತರಾಗಿದ್ದರು.ಧರ್ಮಸ್ಥಳದ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಕಾಲದಲ್ಲಿ ಅವರು ಶಿಸ್ತಿನ ಸಿಪಾಯಿಯಾಗಿ, ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದರು.ಆನಂದ ಶೆಟ್ಟಿಯಂತಹ ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ರೂಪಿಸಿದ ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯನ್ನು ನೀಡಿ ಉದಯೋನ್ಮುಖ ಕಲಾವಿದರನ್ನು ರೂಪಿಸಿದ್ದಾರೆ.ಅವರ...
ಜಯಂತ್ ಟಿ ಅವರಿಂದ ಧರ್ಮಸ್ಥಳ ಠಾಣೆಗೆ ದೂರು
ಧರ್ಮಸ್ಥಳ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಮೃತದೇಹವನ್ನು ಹೂತು ಹಕಿರುವುದನ್ನು ತಾನು ನೋಡಿದ್ದೇನೆ ಎಂದು ಶನಿವಾರ ಎಸ್.ಐ.ಟಿ ಕಚೇರಿಗೆ ದೂರು ನೀಡಲು ಬಂದಿದ್ದ ವೇಳೆ ಹೇಳಿಕೆ ನೀಡಿದ್ದ ಜಯಂತ್ ಟಿ ಇದೀಗ ಈ ಬಗ್ಗೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ. ಇದದಾ ಬಳಿಕ ಇಂದು ಎಸ್.ಐ.ಟಿ ಕಚೇರಿಗೆ ಬಂದಿದ್ದರು. ಅವರನ್ನು ಈ ಪ್ರಕರಣದ ಬಗ್ಗೆ ದೂರನ್ನು ಧರ್ಮಸ್ಥಳ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದು ಅದರಂತೆ ಜಯಂತ್ .ಟಿ ಅವರು ಧರ್ಮಸ್ಥಳ ಠಾಣೆಗೆ ತೆರಳಿ ದೂರನ್ನು ನೀಡಿದ್ದಾರೆ. ಈ...
ನೇತ್ರಾವತಿ ಸ್ನಾನ ಘಟ್ಟದಲ್ಲಿ ಮತ್ತೆ ಪತ್ತೆಯಾದ ಮೃತದೇಹದ ಅವಶೇಷಗಳು?
ಬೆಳ್ತಂಗಡಿ; ನೇತ್ರಾವತಿ ಸ್ನಾನಘಟ್ಟ ದಲ್ಲಿ ನಡೆಯುತ್ತಿರುವ ಮೃತದೇಹಗಳಿಗಾಗಿನ ಹುಟುಕಾಟ ಕಾರ್ಯದಲ್ಲಿ ಹೊಸ ಬೆಳವಣಿಗೆ ನಡೆದಿದ್ದು ಸಾಕ್ಷಿ ದೂರು ದಾರ ಇಂದು ಹೊಸ ಸ್ಥಳಕ್ಕೆ ತಂಡವನ್ನು ಕರೆದೊಯ್ದಿದ್ದು ಅಲ್ಲಿ ಕಳೇಬರವೊಂದರ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಲಭ್ಯವಾಗುತ್ತಿದೆ. ಈ ಬಗ್ಗೆ ಯಾವುದೆ ಸ್ಪಷ್ಟನೆಯನ್ನು ನೀಡಲು ಅಧಿಕಾರಿಗಳು ಇನ್ನೂ ಮುಂದಾಗಿಲ್ಲಆತ ಈ ಹಿಂದೆ ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸದೆ ಇಂದು ಹೊಸ ಸ್ಥಳದಲ್ಲಿ ಹುಡುಕಾಟ ನಡೆಸುವ ವೇಳೆ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿದೆ ಆದರೆ ಅರಣ್ಯದ ಒಳಗೆ 11.30ಕ್ಕೆ ಅರಣ್ಯಕ್ಕೆ ತೆರಳಿದ ತಂಡ ಅರಣ್ಯದಿಂದ ಇನ್ನೂ...
11 ನೇ ಸ್ಥಳದಳದಲ್ಲಿ ನಡೆಯುತ್ತಿಲ್ಲ ಹುಡುಕಾಟ ಮೃತ ದೇಹಗಳ ಹುಡುಕಾಟದಲ್ಲಿ ಹೊಸ ಬೆಳವಣಿಗೆ
ಬೆಳ್ತಂಗಡಿ; ಮೃತದೆಹಗಳಿಗಾಗಿ ಹುಡುಕಾಟ ನಡೆಯುವ ನೇತ್ರಾವತಿ ಸ್ನಾನಘಟ್ಟದ ಪರಿಸರದಲ್ಲಿ ಸೋಮವಾರ ಹೊಸ ಬೆಳವಣಿಗೆಗಳು ನಡೆದಿದ್ದು 11ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭವಾಗ ಸಂದರ್ಭದಲ್ಲಿ ಅನಾಮಿಕ ವ್ಯಕ್ತಿ ಕಾರ್ಯಾಚರಣೆ ನಾಡೆಸುತ್ತಿರು ತಂಡವನ್ನು ಗುರುತಿಸಿದ ಸ್ಥಾನದಿಂದ ಮೇಲ್ಭಾಗಕ್ಕೆ ಕರೆದೊಯ್ದಿದ್ದಾನೆ ಇದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.ಆತ ಗುರುತಿಸಿದ 11ನೆಯ ಸ್ಥಳದಲ್ಲಿ ಇನ್ನೂ ಅಗೆಯುವ ಕಾರ್ಯ ಆರಂಭವಾಗಿಲ್ಲಈ ಪ್ರದೇಶಲ್ಲಿ ದಟ್ಟವಾದ ಕಾಡಿದ್ದು ಈ ಕಾಡಿನ ಪ್ರದೇಶದಲ್ಲಿ ಆತ ಹೊಸ ಸ್ಥಳಗಳನ್ನು ಗುರುತಿದ್ದಾನೆಯೇ ಎಂಬ ಅನುಮಾನವಿದೆ. ಈ ಅರಣ್ಯದಲ್ಲಿ ಏನಿದೆ ಎಂಬುದು ಕುತೂಹಲದ ವಿಚಾರವಾಗಿದೆ.ಈತ ಹೊಸ ಸ್ಥಳಗಳನ್ನು ಗುರುತಿಸಿದ್ದಾನೆಯೇ ಅಥವಾ ಬೇರೇನಾದರೂ...












