ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ- ಕಾಪು ರಕ್ಷಿತಾರಣ್ಯದ ನಿಡಿಗಲ್ -ಸೀಟು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಾಸನದ ಶಿವಕುಮಾರ್ ಎಂಬವರು ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೆದ್ದಾರಿಗೆ ಮರ ಅಡ್ಡಲಾಗಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇಲ್ಲಿಂದ ಸುಮಾರು 50 ಮೀ ದೂರದಲ್ಲಿ ಗುರುವಾರ ಮಧ್ಯಾಹ್ನ ಹೆದ್ದಾರಿ ರಸ್ತೆಗೆ ಮರ ಉರುಳಿ...
ಮೃತದೇಹಗಳನ್ನು ಹೂತಿಟ್ಟ ಪ್ರಕರಣ; ಎಸ್.ಐ.ಟಿ ತಂಡ ಮಂಗಳೂರಿಗೆ ಆಗಮನ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದು ತನಿಖಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್ ನೇರವಾಗಿ ಎಸ್.ಐ.ಟಿ ಇತರ ಅಧಿಕಾರಿಗಳಿದ್ದ ಮಂಗಳೂರು ಐಬಿಗೆ ತೆರಳಿದ್ದು ಅಲ್ಲಿ ಇತರ ಎಸ್.ಐ.ಟಿ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದಾಗಿ ತಿಳಿದು ಬಂದಿದೆ ಪ್ರಕರಣದ ಈ ವರೆಗಿನ ಬೆಳವಣಿಗೆಗಳ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸಿ ಅದರ ಬಗ್ಗೆ ಚರ್ಚಿಸಿದ ಬಳಿಕ ಮುಂದಿನ ತನಿಖೆಯ ಬಗ್ಗೆ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಕಾಡಾನೆ ಸಮಸ್ಯೆ; ಕೆ.ಎಸ್.ಎಂ.ಸಿ.ಎ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ
ಬೆಳ್ತಂಗಡಿ; ಕಾಡಾನೆ ಹಾವಳಿಯಿಂದಾಗಿ ತತ್ತರಿಸಿ ಹೋಗಿರುವ ಬೆಳ್ತಂಗಡಿ ತಾಲೂಕಿನ ಜನರ ಪರವಾಗಿ ದಿನಾಂಕ 21/07/2025 ರಂದು ಬೆಳ್ತಂಗಡಿ ಯಲ್ಲಿ KSMCA ನೇತೃತ್ವದಲ್ಲಿ ನಡೆದ ಜನಾಂಧೋಲನದ ಮುಂದುವರಿದ ಬಾಗವಾಗಿ ಜು25ರಂದು ಉಸ್ತುವಾರಿ ಸಚಿವರಿಗೆ ಕೆ.ಎಸ್.ಎಂ.ಸಿ.ಎ ಯ ಪರವಾಗಿ ಕೇಂದ್ರ ಸಮಿತಿ ಅಧ್ಯಕ್ಷ ರಾದ ಬಿಟ್ಟಿ ನೆಡುನಿಲಂ ರವರ ಸೂಚನೆ ಮೇರೆಗೆ ಕೇಂದ್ರಸಮಿತಿ ಸದಸ್ಯರಾದ ಜಾರ್ಜ್ ಟಿ ವಿ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆನೆ ಹಾಗೂ...
ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅವರಿಗೆ ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025
ಬೆಳ್ತಂಗಡಿ; ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಅವರು ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025 ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ರಾಜ ಕೇಸರಿಯ ಟ್ರಸ್ಟನ್ನು ಹುಟ್ಟಿಹಾಕಿ ಶ್ರಮಿಕ ಯುವಕರನ್ನು ಒಟ್ಟುಗೂಡಿಸಿ ಮತ್ತು ಅವರ ಕೈಲಾದ ಸೇವಾ ಮೂಲಕ ಸಮಾಜದ ದಾನಿಗಳ ಮೂಲಕ ಅದೆಷ್ಟೋ ಕುಟುಂಬಗಳಿಗೆ ಆಸರೆಯಾಗಿ ಎಷ್ಟೋ ವಿದ್ಯಾರ್ಥಿಗಳ ಬಾಳಲ್ಲಿ ಬೆಳಕಾಗಿ ರಾಜ್ಯ ಮಟ್ಟದಲ್ಲಿ ಜನ ಸೇವಾ ಮನೋಭಾವದ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವಂತಹ ಸೇವಾ ಸಂಘಟನೆಯಾದ...
ಧರ್ಮಸ್ಥಳ ಪ್ರಕರಣ; ಬೆಳ್ತಂಗಡಿ ಯಲ್ಲಿ ಎಸ್.ಐ.ಟಿ ಕಚೇರಿ ಇಂದಿನಿಂದ ತನಿಖೆ ಆರಂಭ?
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿ ಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು ಜು 25ರಂದು ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭವಾಗಲಿದ್ದು ಇಲ್ಲಿ ಎಲ್ಲ ಸುದ್ದತೆಗಳನ್ನು ಮಾಡಲಾಗುತ್ತಿರುವುದಾಗಿ ತಿಳಿದು ಬಂದಿದೆಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪವೇ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿ ಗೃಹವನ್ನೇ ಎಸ್.ಐ.ಟಿ ಕೇಂದ್ರವಾಗಿ ಮಾಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.ನೂತನವಾಗಿ ನಿರ್ಮಾಣಗೊಂಡಿರುವ ಈ ವಸತಿಗೃಹಗಳ ಉದ್ಘಾಟನೆ ಇನ್ನೂ ನಡೆದಿಲ್ಲ ಇಲ್ಲಿ ಇಡೀ ತಂಡ ಕಾರ್ಯ ನಿರ್ವಹಿಸಲು ಅಗತ್ಯವಿರುವ ಸ್ಥಳಾವಕಾಶಗಳಿದೆ. ಪೊಲೀಸ್ ಠಾಣೆಯ ಆವರಣದ ಒಳಗೆಯೇ ಈ...
ಬೆಳ್ತಂಗಡಿ:ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ಪತ್ನಿಗೆ ಕಿರುಕುಳ ನೀಡಿ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು
ಬೆಳ್ತಂಗಡಿ : ಎರಡು ತಿಂಗಳ ಹಿಂದೆ ಮದುವೆಯಾದ ದಂಪತಿಗಳು ಹನಿಮೂನ್ ಗೆ ಬಂದು ಉಜಿರೆಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಉಳಿದುಕೊಂಡು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಂದಗೋಕುಲ ನಿವಾಸಿಯಾಗಿರುವ ಸಿದ್ದರಾಜು ಗೌಡ ಮಗನಾದ ಮೂರನೇ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ಪತಿ ವಿಶ್ವನಾಥ(24) ಮತ್ತು 22 ವರ್ಷದ ಪತ್ನಿ 22-05-2025 ರಂದು ಮದುವೆಯಾಗಿದ್ದು. ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರತಿಷ್ಠಿತ ಹೊಟೇಲಿಗೆ ಬಂದು...
ದ.ಕ ಜಿಲ್ಲೆಯಲ್ಲಿ ಜು25 ರಂದು ಶಾಲಾಕಾಲೇಜು ಗಳಿಗೆ ರಜೆ ಜಿಲ್ಲಾಧಿಕಾರಿ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ 24 ಗಂಟೆಗಳಿಂದ ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು. ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಆದೇಶದ ಅನ್ವಯ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು...
ಶಾಸಕ ಹರೀಶ್ ಪೂಂಜ ಅವರಿಂದ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭೇಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ
ಬೆಳ್ತಂಗಡಿ : ಜು24 ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿಯವರನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ತಾಲೂಕಿನ ಪ್ರಮುಖ ಕಾಮಗಾರಿಗಳಾದ ತಾಲೂಕು ಗ್ರಂಥಾಲಯ, ಅಂಬೇಡ್ಕರ್ ಭವನ ಹಾಗೂ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗರ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ನಡೆಸುವ ಕುರಿತು ಚರ್ಚಿಸಿದರು.
ನಿಡಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಿಡಿಗಲ್- ಸೀಟು ಮಧ್ಯೆ ಹೆದ್ದಾರಿ ರಸ್ತೆಗೆ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಗುರುವಾರ ನಡೆದಿದೆ.ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ ಕಾರಣ ಸುಮಾರು ಅರ್ಧ ತಾಸಿಗಿಂತ ಅಧಿಕಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಮರ ಉರುಳುವ ವೇಳೆ ಈ ಪ್ರದೇಶದಲ್ಲಿ ವಾಹನಗಳ ಸಂಚಾರ ಇರದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಮುಂಡಾಜೆ ಗ್ರಾಪಂ, ಪೊಲೀಸ್, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಮರ ತೆರವು ಕಾರ್ಯ ನಡೆಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಬೆಳ್ತಂಗಡಿ: ಅಜ್ಮೀರ್ ಯಾತ್ರೆ ಹೊರಟಿದ್ದ ಗುರುವಾಯನಕೆರೆ ನಿವಾಸಿ ಹೃದಯಾಘಾತದಿಂದ ಮೃತ್ಯು
ಬೆಳ್ತಂಗಡಿ: ರಾಜಸ್ಥಾನದ ಪ್ರಖ್ಯಾತ ಮುಸ್ಲಿಂ ಧಾರ್ಮಿಕ ಶ್ರದ್ಧಾ ಕೇಂದ್ರ ಅಜ್ಮೀರ್ ದರ್ಗಾ ಶರೀಫ್ ಗೆ ಯಾತ್ರೆ ಹೊರಟಿದ್ದ ಗುರುವಾಯನಕೆರೆ ಶಕ್ತಿ ನಗರದ ನಿವಾಸಿ(ಪೊಟ್ಟುಕೆರೆ) ಇಸ್ಹಾಕ್(37) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಮಿತ್ರ ಅಶ್ರಫ್ ಕಾಪಿನಡ್ಕ ಅವರೊಂದಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದ ಇವರಿಗೆ ಸುರತ್ಕಲ್ ತಲುಪುವಷ್ಟರಲ್ಲಿ ಭಾರೀ ಎದೆ ನೋವು ಕಾಣಿಸಿಕೊಂಡಿತು. ಅಲ್ಲೇ ರೈಲಿನಿಂದ ಇಳಿದು ಹೊರವಲಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ ತರುವ ವೇಳೆ ಅವರು ಅಸುನೀಗಿದರು.ಇಸ್ಹಾಕ್ ಅವರು ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದರು.ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಓರ್ವೆ...















